2 ಕೊರಿಂಥದವರಿಗೆ 7:5 - ಪರಿಶುದ್ದ ಬೈಬಲ್5 ನಾವು ಮಕೆದೋನಿಯಕ್ಕೆ ಬಂದಾಗ ನಮಗೆ ವಿಶ್ರಾಂತಿಯೇ ಇರಲಿಲ್ಲ. ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿದ್ದವು. ಹೊರಗೆ ಕಲಹವಿತ್ತು, ಒಳಗೆ ಭಯವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಅಮಿ ಮೆಸಿದೊನಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಸಗ್ಳೆಚ್ ಹಾರುನ್ ಗೆಲ್ಲಾಂವ್, ಸಗ್ಳ್ಯಾಕ್ಡೆ ಅಮ್ಕಾ ಕಸ್ಟಾಚ್ ರಾಕುನ್ಗೆತ್ ಹೊತ್ತಿ, ಭಾಯ್ನಾ ಝಗ್ಡೆ, ಭುತ್ತುರ್ನಾ ಭಿಂಯೆ ಹೊತ್ತೆ. ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.