Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:7 - ಪರಿಶುದ್ದ ಬೈಬಲ್‌

7 ಅವನ ಆಗಮನದಿಂದಲೂ ನೀವು ಅವನಿಗೆ ಕೊಟ್ಟ ಆದರಣೆಯಿಂದಲೂ ನಮಗೆ ಸಮಾಧಾನವಾಯಿತು. ನನ್ನನ್ನು ನೋಡಲು ನಿಮಗಿರುವ ಹಂಬಲದ ಕುರಿತಾಗಿಯೂ ನಿಮ್ಮ ಕಾರ್ಯಗಳಿಂದ ನಿಮಗಾಗಿರುವ ದುಃಖದ ಕುರಿತಾಗಿಯೂ ನನ್ನ ವಿಷಯವಾಗಿ ನಿಮಗಿರುವ ಮಹಾಹಿತಚಿಂತನೆಯ ಕುರಿತಾಗಿಯೂ ಅವನು ನನಗೆ ಹೇಳಿದಾಗ ನನಗೆ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಬರುವಿಕೆಯಿಂದ ಮಾತ್ರವಲ್ಲದೆ ಅವನು ತಾನು ನಿಮ್ಮಲ್ಲಿ ಬಹಳ ಆದರಣೆಯನ್ನು ಹೊಂದಿದೆನೆಂದು ಹೇಳಿದ್ದರಿಂದಲೂ ನಮ್ಮನ್ನು ಸಂತೈಸಿದನು. ಅವನು ನಿಮ್ಮ ಹಂಬಲ, ನಿಮ್ಮ ಗೋಳಾಟ, ನನ್ನ ವಿಷಯವಾದ ನಿಮ್ಮ ಆಸಕ್ತಿ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಯೆನ್ಯಾಚ್ಯಾ ವೈನಾ ಎವ್ಡೆಚ್ ನ್ಹಯ್, ತುಮಿ ತೆಕಾ ದಿಲ್ಲ್ಯಾ ಉತ್ತೆಜನಾಚಿ ಖಬರ್ ಆಯ್ಕುನ್, ಮಾಜ್ಯಾ ಭುತ್ತುರ್ ಜಿವ್ ಭರ್‍ಲೊ ತುಮಿ ಮಾಕಾ ಕವ್ಡೆ ರಾಕುಲ್ಯಾಶಿ, ಅನಿ ಕವ್ಡೆ ಬೆಜಾರಾನ್ ಹಾಸಿ, ಅನಿ ಉಸ್ಕೊ ಕರುನ್ ಹಾಸಿ ಹೆ ಸಗ್ಳೆ ಮಾಕಾ ತೆನಿ ಸಾಂಗಲ್ಲ್ಯಾ ತನ್ನಾ, ಮಾಕಾ ಅನಿಉಲ್ಲೊ ಸಂತೊಸ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:7
34 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.


ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.


ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ನೀವು ಪ್ರಭುವಿನಲ್ಲಿ ಬಲವಾಗಿದ್ದರೆ, ನಮ್ಮಲ್ಲಿ ಜೀವ ತುಂಬಿದಂತಿರುವುದು.


ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.


ಅಲ್ಲಿ ನಾನು ನಿಮ್ಮೊಡನೆ ಇರದಿದ್ದರೂ ನನ್ನ ಮನಸ್ಸು ನಿಮ್ಮೊಡನಿರುತ್ತದೆ. ನಿಮ್ಮ ಕ್ರಮಬದ್ಧವಾದ ನಡತೆಯನ್ನು ನೋಡಲು ಮತ್ತು ಕ್ರಿಸ್ತನಲ್ಲಿ ಇಟ್ಟಿರುವ ದೃಢನಂಬಿಕೆಯನ್ನು ಅರಿಯಲು ಬಹಳ ಸಂತೋಷಪಡುತ್ತೇನೆ.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.


ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.


ಅಂದರೆ ನಾವು ಹೊಂದಿರುವ ನಂಬಿಕೆಯಿಂದ ನಾವು ಒಬ್ಬರಿಗೊಬ್ಬರು ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮ ನಂಬಿಕೆ ನನಗೆ ಸಹಾಯ ಮಾಡುತ್ತದೆ ಮತ್ತು ನನ್ನ ನಂಬಿಕೆ ನಿಮಗೆ ಸಹಾಯ ಮಾಡುತ್ತದೆ.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.


ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ಆದರೆ ನೀವು ನಿಮ್ಮ ವಿಷಯದಲ್ಲಿ ಇನ್ನೂ ಹೆಚ್ಚಳಪಡುತ್ತಿದ್ದೀರಿ. ನೀವು ದುಃಖಭರಿತರಾಗಿರಬೇಕಿತ್ತು. ಆ ಪಾಪ ಮಾಡಿದ ವ್ಯಕ್ತಿಯನ್ನು ನಿಮ್ಮ ಸಭೆಯಿಂದ ಹೊರಗೆ ಹಾಕಬೇಕಿತ್ತು.


ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.


ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.


ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು