Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:9 - ಪರಿಶುದ್ದ ಬೈಬಲ್‌

9 ಈಗ ನಾನು ಸಂತೋಷವಾಗಿದ್ದೇನೆ. ನಿಮ್ಮನ್ನು ದುಃಖಿತರನ್ನಾಗಿ ಮಾಡಿದ್ದಕ್ಕಾಗಿ ನಾನು ದುಃಖಿಸುತ್ತಿಲ್ಲ. ಆದರೆ ನಿಮ್ಮ ದುಃಖವು ನಿಮ್ಮ ಹೃದಯಗಳಲ್ಲಿ ಪರಿವರ್ತನೆಯನ್ನು ಉಂಟುಮಾಡಿದ್ದರಿಂದ ನಾನು ಸಂತೋಷವಾಗಿದ್ದೇನೆ. ದೇವರ ಇಚ್ಫೆಗನುಸಾರವಾಗಿ ನೀವು ದುಃಖಿತರಾದಿರಿ. ಆದ್ದರಿಂದ ನಮ್ಮಿಂದ ನಿಮಗೆ ಯಾವ ರೀತಿಯಲ್ಲಿಯೂ ನೋವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಬೇರೆ ಮನಸ್ಸನ್ನು ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನವ್ಮಿುಂದ ಯಾವದರಲ್ಲಿಯೂ ನಷ್ಟಪಡಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಕಾ ಬೆಜಾರಾತ್ ಘಾಟ್ಲೊ ಮನುನ್ ಮಿಯಾ ಕುಶಿ ನಾವ್, ಖರೆ ತುಮ್ಚ್ಯಾ ಬೆಜಾರಾನ್ ತುಮ್ಚೆ ಜಿವನ್ ಬದಲ್ಲ್ಯಾನ್ ಮನುನ್ ಮಾಕಾ ಕುಶಿ. ತುಮ್ಕಾ ಗಾವಲ್ಲೊ ಬೆಜಾರ್ ದೆವಾಚ್ಯಾ ಇಚ್ಚಾ ಸರ್ಕೆಚ್ ಮನುನ್ ಹೊತಾ. ತಶೆ ಮನುನ್ ಅಮ್ಚ್ಯಾ ವೈನಾ ತುಮ್ಕಾ ಕಾಯ್ಬಿ ಲುಕ್ಷಾನ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:9
18 ತಿಳಿವುಗಳ ಹೋಲಿಕೆ  

ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ನಗುವಿಗಿಂತ ವ್ಯಸನವು ಇನ್ನೂ ಉತ್ತಮ. ಯಾಕೆಂದರೆ ನಮ್ಮ ಮುಖವು ವ್ಯಸನದಿಂದಿರುವಾಗ ನಮ್ಮ ಹೃದಯಕ್ಕೆ ಒಳ್ಳೆಯದಾಗುವುದು.


ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ.


ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು