Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:21 - ಪರಿಶುದ್ದ ಬೈಬಲ್‌

21 ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಚ್ಯಾ ಡೊಳಾಚ್ಯಾ ಇದ್ರಾಕ್ ಎವ್ಡೆಚ್ ನ್ಹಯ್ , ಮಾನ್ಸಾಂಚ್ಯಾಬಿ ದೊಳ್ಯಾಂಚ್ಯಾ ಇದ್ರಾಕ್ ಹೊಯ್ ಸರ್ಕೆ ದಿಸುಚೆ ತಸೆ ಕರುಚೆ ಮನ್ತಲೊಚ್ ಅಮ್ಚೊ ಉದ್ದೆಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:21
19 ತಿಳಿವುಗಳ ಹೋಲಿಕೆ  

ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ಎಲ್ಲಾ ವಿಧವಾದ ಕೆಟ್ಟತನದಿಂದ ದೂರವಾಗಿರಿ.


ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.


ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.


ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.


ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


“ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.


ರೂತಳು ಬೆಳಗಿನ ಜಾವದವರೆಗೂ ಬೋವಜನ ಪಾದಗಳ ಬಳಿಯಲ್ಲಿಯೇ ಮಲಗಿದ್ದು ಇನ್ನೂ ಕತ್ತಲಿರುವಾಗಲೇ ಎದ್ದಳು. ಬೋವಜನು ಅವಳಿಗೆ, “ನೀನು ನಿನ್ನೆ ರಾತ್ರಿ ನನ್ನಲ್ಲಿಗೆ ಬಂದಿದ್ದೆ ಎಂಬ ಸಂಗತಿಯು ರಹಸ್ಯವಾಗಿರಲಿ” ಎಂದು ಹೇಳಿದನು.


ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.


ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ.


ಇದಲ್ಲದೆ, ಸಹಾಯ ಮಾಡಲು ಯಾವಾಗಲೂ ಸಿದ್ಧನಾಗಿರುವ ನಮ್ಮ ಸಹೋದರನನ್ನು ಅವರೊಂದಿಗೆ ಕಳುಹಿಸಿಕೊಡುತ್ತಿದ್ದೇವೆ. ಅವನು ಅನೇಕ ವಿಧದಲ್ಲಿ ತನ್ನನ್ನು ನಿರೂಪಿಸಿದ್ದಾನೆ. ಈಗ ಅವನಿಗೆ ನಿಮ್ಮಲ್ಲಿ ಹೆಚ್ಚು ಭರವಸೆ ಇರುವುದರಿಂದ ಮತ್ತಷ್ಟು ಸಹಾಯ ಮಾಡಲು ಬಯಸುತ್ತಾನೆ.


ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.


ಎಲೀಯನು, “ನಾಲ್ಕು ಕೊಡಗಳಲ್ಲಿ ನೀರನ್ನು ತುಂಬಿಸಿ. ಆ ಮಾಂಸದ ತುಂಡುಗಳ ಮೇಲೆ ಮತ್ತು ಸೌದೆಯ ಮೇಲೆ ಆ ನೀರನ್ನು ಸುರಿಯಿರಿ” ಎಂದು ಹೇಳಿದನು. ಎಲೀಯನು, “ಮತ್ತೆ ಅದೇ ರೀತಿ ಮಾಡಿ” ಎಂದನು, ಅವನು, “ಮೂರನೆಯ ಸಲ ಅದೇ ರೀತಿ ಮಾಡಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು