Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:10 - ಪರಿಶುದ್ದ ಬೈಬಲ್‌

10 ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪೆರ್‍ತಲ್ಯಾಕ್ ಬಿಂಯ್ ಅನಿ ಖಾತಲ್ಯಾಕ್ ಭಾಕ್ರಿ ಗಾವಿ ಸರ್ಕೆ ಕರ್‍ತಾ ತೊ ದೆವ್ ಭರ್ಪುರ್ ಮಾಪಾನ್ ತುಮ್ಚ್ಯಾ ಬಿಯಾಳಾಕ್‍ಬಿ ಚೆಡ್ವುತಾ ಅನಿ ತುಮ್ಚ್ಯಾ ದಾನಾಚೊ ಪಳ್ ಜಾಸ್ತಿ ವಾಡ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:10
16 ತಿಳಿವುಗಳ ಹೋಲಿಕೆ  

“ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಆ ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಆ ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.


ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಸ್ವಲ್ಪ ಬಿತ್ತುವವನು ಕೇವಲ ಸ್ವಲ್ಪವನ್ನೇ ಕೊಯ್ಯುವನು, ಆದರೆ ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು.


ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.


ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ.


ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.


ನಾವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ಪ್ರೀತಿಯು ವೃದ್ಧಿಯಾಗಿ ಒಬ್ಬೊಬ್ಬರ ಮೇಲೆಯೂ ಇತರ ಜನರೆಲ್ಲರ ಮೇಲೆಯೂ ಹೆಚ್ಚಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


“ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.


ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.


ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.


ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆಂದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ.


ನೀವು ಮಾಡುವ ಈ ಸೇವಾಕಾರ್ಯದಿಂದ ಕೊರತೆಯಲ್ಲಿರುವ ದೇವಜನರಿಗೆ ಸಹಾಯವಾಗುವುದು. ಅಷ್ಟು ಮಾತ್ರವೇ ಅಲ್ಲ, ಇದರಿಂದಾಗಿ ದೇವರಿಗೆ ಹೆಚ್ಚುಹೆಚ್ಚಾಗಿ ಕೃತಜ್ಞತಾಸ್ತುತಿ ಉಂಟಾಗುವುದು.


ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು