Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:12 - ಪರಿಶುದ್ದ ಬೈಬಲ್‌

12 ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯಾ ಬರ್‍ಯಾ ಖಬ್ರೆಸಾಟ್ನಿ ಮಿಯಾ ಹ್ಯೊ ಕಸ್ಟ್ ಸೊಸುಕ್ ಲಾಗ್ಲಾ. ಖರೆ ಮಾಕಾ ಅನಿಬಿ ಬರೊಸೊ ಹಾಯ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಕೊನಾಚ್ಯಾ ವರ್‍ತಿ ಬರೊಸೊ ಥವ್ಲಾ; ತೊ ಮಾಕಾ ಗೊತ್ತ್ ಹಾಯ್ ಅನಿ ಜೆ ಕಾಮ್ ಮಿಯಾ ಕರುನ್ ಸಾರ್ತಲೆ ಮನುನ್ ಹಾಯ್; ತ್ಯಾ ದಿಸಾ ಪತರ್ ಮಾಜಿ ರಾಕನ್ ಕರ್‍ತಲೊ ಬಳ್ ತೆಕಾ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:12
58 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


“ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!


ಆ ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.


“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.


ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.”


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.


ಸ್ತೆಫನನಿಗೆ ಕಲ್ಲುಗಳನ್ನು ಎಸೆದರು. ಆದರೆ ಸ್ತೆಫನನು ಪ್ರಾರ್ಥಿಸುತ್ತಾ, “ಪ್ರಭುವಾದ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿಕೊ!” ಎಂದನು.


ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.


ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ನನ್ನ ಒಡೆಯನಾದ ಯೆಹೋವನು ನನಗೆ ಸಹಾಯ ಮಾಡುವನು. ಆದ್ದರಿಂದ ಅವರ ಶಾಪಗಳು ನನಗೆ ಯಾವ ಹಾನಿಯನ್ನು ಮಾಡುವದಿಲ್ಲ. ನಾನು ಬಲವಾಗಿರುವೆನು. ನಾನು ನಿರಾಶನಾಗುವದಿಲ್ಲವೆಂದು ನನಗೆ ಗೊತ್ತಿದೆ.


ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!


ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ಆ ದಿನವು ನಿಮಗೆ ಕಳ್ಳನಂತೆ ಇದ್ದಕ್ಕಿದ್ದಂತೆ ಬರುವುದಿಲ್ಲ.


ನ್ಯಾಯತೀರ್ಪಿನ ದಿನದಲ್ಲಿ ಆ ಜನರ ಗತಿಯು ಸೊದೋಮಿನ ಜನರ ಗತಿಗಿಂತಲೂ ಕಠಿಣವಾಗಿರುವುದು” ಎಂದು ಹೇಳಿದನು.


ಕೊನೆಯ ದಿನಗಳಲ್ಲಿ ಅನೇಕರು ನನಗೆ, ‘ನೀನೇ ನಮ್ಮ ಪ್ರಭು! ನಿನ್ನ ವಿಷಯವಾಗಿ ನಾವು ಬೋಧಿಸಿದೆವು. ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸಿದೆವು ಮತ್ತು ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆವು’ ಎಂದು ಹೇಳುವರು.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ.


ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.


ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು