Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:13 - ಪರಿಶುದ್ದ ಬೈಬಲ್‌

13 ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ವಿಶ್ವಾಸಾತ್ ಅನಿ ಪ್ರೆಮಾತ್ ರ್‍ಹಾವ್ನ್ ಎಕ್ ಉದಾರನ್ ಹೊವ್ನ್ ಚಲುಸಾಟಿ ಮನುನ್ ಮಿಯಾ ತುಕಾ ಶಿಕ್ವಲ್ಲ್ಯಾ ಖರ್‍ಯಾ ಗೊಸ್ಟಿಯಾ ಮನಾತ್ ಘಟ್ ಥವ್ನ್ ಘೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:13
30 ತಿಳಿವುಗಳ ಹೋಲಿಕೆ  

ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.


ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ.


ನೀವು ನನ್ನಿಂದ ಕಲಿತುಕೊಂಡದ್ದನ್ನು, ಹೊಂದಿಕೊಂಡದ್ದನ್ನು, ಕೇಳಿದ್ದನ್ನು ಮತ್ತು ಕಣ್ಣಾರೆ ಕಂಡದ್ದನ್ನು ಮಾಡಿರಿ. ಆಗ, ಶಾಂತಿಯನ್ನು ಕೊಡುವ ದೇವರು ನಿಮ್ಮೊಂದಿಗಿರುವನು.


ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.


ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.


“ನಾನು ಬೇಗನೆ ಬರುತ್ತೇನೆ. ಈಗ ನೀನಿರುವಂತೆಯೇ ಇರು. ಆಗ ಯಾರೂ ನಿನ್ನ ಕಿರೀಟವನ್ನು ಕಸಿದುಕೊಳ್ಳಲಾರರು.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.


ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.


ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ.


ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.


ಸತ್ಯಬೋಧನೆಯನ್ನು ಅನುಸರಿಸಲು ಜನರು ಮಾಡಬೇಕಾದ ಕಾರ್ಯಗಳನ್ನು ಅವರಿಗೆ ನೀನು ತಿಳಿಸು.


ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.


ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.


ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ.


ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.


ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ.


ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!


ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ.


ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು.


ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು