Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:18 - ಪರಿಶುದ್ದ ಬೈಬಲ್‌

18 ಆ ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತ್ಯಾ ದಿಸಿ ಧನಿ ತೆಚ್ಯಾ ವರ್‍ತಿ ದಯಾ ದಾಕ್ವುಂದಿ! ಅನಿ ಎಫೆಜಾತ್ ಮಾಜೆಸಾಟಿ ತೆನಿ ಕವ್ಡೆ ಬರೆ ಕಾಮ್ ಕರಲ್ಲ್ಯಾನ್ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:18
26 ತಿಳಿವುಗಳ ಹೋಲಿಕೆ  

ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.


ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು.


ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.


ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ.


ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ.


ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,


ಇದಲ್ಲದೆ ಕೂಜನ (ಹೆರೋದನ ಸಹಾಯಕ) ಹೆಂಡತಿಯಾದ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕ ಸ್ತ್ರೀಯರು ಇದ್ದರು. ಈ ಸ್ತ್ರೀಯರು ಯೇಸುವಿಗೂ ಆತನ ಅಪೊಸ್ತಲರಿಗೂ ತಮ್ಮ ಸ್ವಂತ ಹಣದಿಂದ ಸಹಾಯ ಮಾಡುತ್ತಿದ್ದರು.


“ನಮ್ಮ ದೇವರ ಮಹಾಕರುಣೆಯಿಂದ ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.


ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.


ನಂತರ ಎಲೀಯನು, “ನನ್ನ ದೇವರಾದ ಯೆಹೋವನೇ, ಈ ವಿಧವೆಯು ತನ್ನ ಮನೆಯಲ್ಲಿ ನನಗೆ ಸ್ಥಳವನ್ನು ಕೊಟ್ಟಿದ್ದಾಳೆ. ನೀನು ಅವಳಿಗೆ ಈ ಕೇಡನ್ನು ಮಾಡುವೆಯಾ? ನೀನು ಅವಳ ಮಗುವನ್ನು ಸಾಯಿಸುವೆಯಾ?” ಎಂದು ಪ್ರಾರ್ಥಿಸಿದನು.


ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.


ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ಆದರೆ ಪ್ರತಿಯೊಬ್ಬನ ಕೆಲಸವು ಸ್ಪಷ್ಟವಾಗಿ ಕಾಣುವುದು; ಏಕೆಂದರೆ, ಕ್ರಿಸ್ತನು ಬರುವ ದಿನವು ಅದನ್ನು ಸ್ಪಷ್ಟಪಡಿಸುವುದು. ಆ ದಿನವು ಬೆಂಕಿಯೊಂದಿಗೆ ಉದಯಿಸುವುದು. ಆ ಬೆಂಕಿಯು ಪ್ರತಿಯೊಬ್ಬ ವ್ಯಕ್ತಿಯ ಕೆಲಸವನ್ನು ಪರೀಕ್ಷಿಸುವುದು.


ಅವನು ರೋಮಿಗೆ ಬಂದಾಗ, ಬಹಳ ಹುಡುಕಾಡಿ ನನ್ನನ್ನು ಸಂಧಿಸಿದನು.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು