Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:4 - ಪರಿಶುದ್ದ ಬೈಬಲ್‌

4 ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನ ಕಣ್ಣೀರುಗಳನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಿಯಾ ತನ್ನಾ ಜಾತಾನಾ ಡೊಳ್ಯಾನಿ ಕಾಡಲ್ಲ್ಯಾ ದುಕ್ಕಾಂಚಿ ಮಾಕಾ ಯಾದ್ ಹಾಯ್ ಅನಿ ಹೊತಾ ತವ್ಡೆ ಲಗ್ಗು ತುಕಾ ಬಗುಚೆ ಮನ್ತಲಿ ಮಾಜಿ ಆಶಾ. ತನ್ನಾಚ್ ಮಾಜ್ಯಾ ಜಿವಾಕ್ ಸಮಾದಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:4
19 ತಿಳಿವುಗಳ ಹೋಲಿಕೆ  

ನಿನಗೆ ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬಾ.


ಚಳಿಗಾಲಕ್ಕೆ ಮುಂಚೆಯೇ ನನ್ನ ಬಳಿಗೆ ಬರಲು ನಿನ್ನಿಂದಾದಷ್ಟು ಪ್ರಯತ್ನಿಸು. ಯುಬೂಲ, ಪೊದೇಯ, ಲೀನ, ಕ್ಲೌದ್ಯ, ಇವರುಗಳು ಮತ್ತು ಇತರ ಸಹೋದರರೆಲ್ಲರೂ ನಿನಗೆ ವಂದನೆಗಳನ್ನು ಹೇಳಿದ್ದಾರೆ.


ಸಹೋದರ ಸಹೋದರಿಯರೇ, ನಿಮ್ಮಿಂದ ಸ್ವಲ್ಪಕಾಲ ಅಗಲಿ ಹೋಗಿದ್ದೆವು. (ನಾವು ನಿಮ್ಮೊಡನೆ ಇರಲಿಲ್ಲ. ಆದರೆ ನಮ್ಮ ಆಲೋಚನೆಗಳು ನಿಮ್ಮೊಡನೆ ಇನ್ನೂ ಇವೆ.) ನಿಮ್ಮನ್ನು ನೋಡಲು ಅತ್ಯಾಸೆಯಿಂದ ಬಹಳ ಪ್ರಯತ್ನಪಟ್ಟೆವು.


ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ನಮ್ಮ ಸಂತೋಷವು ಪರಿಪೂರ್ಣವಾಗಲೆಂದು ನಾವು ನಿಮಗೆ ಈ ಸಂಗತಿಗಳನ್ನು ಬರೆಯುತ್ತಿದ್ದೇವೆ.


ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ.


ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.


ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.


ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,


ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ಆಗ ಇಸ್ರೇಲಿನ ತರುಣಿಯರು ಸಂತೋಷದಿಂದ ನರ್ತಿಸುವರು. ತರುಣರು ಮತ್ತು ವೃದ್ಧರು ಆ ನರ್ತನದಲ್ಲಿ ಭಾಗವಹಿಸುವರು. ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು. ನಾನು ಇಸ್ರೇಲರನ್ನು ಸಂತೈಸುವೆನು. ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು