2 ತಿಮೊಥೆಯನಿಗೆ 2:7 - ಪರಿಶುದ್ದ ಬೈಬಲ್7 ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಹೇಳುವದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಮಿಯಾ ಸಾಂಗ್ತಾ ತ್ಯಾ ಬರ್ಯಾ ಗೊಸ್ಟಿಯಾ ಬರೆ ಕರುನ್ ಅರ್ಥ್ ಕರುನ್ ಘೆ, ಹೆ ಕಳ್ವುನ್ ಘೆವ್ಕ್ ಅಮ್ಚೊ ಧನಿಚ್ ತುಕಾ ಆದಾರ್ ದಿಂವ್ದಿತ್. ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.