Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:7 - ಪರಿಶುದ್ದ ಬೈಬಲ್‌

7 ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಹೇಳುವದನ್ನು ಯೋಚಿಸು; ಕರ್ತನು ಎಲ್ಲಾದರಲ್ಲೂ ನಿನಗೆ ವಿವೇಕವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಿಯಾ ಸಾಂಗ್ತಾ ತ್ಯಾ ಬರ್‍ಯಾ ಗೊಸ್ಟಿಯಾ ಬರೆ ಕರುನ್ ಅರ್ಥ್ ಕರುನ್ ಘೆ, ಹೆ ಕಳ್ವುನ್ ಘೆವ್ಕ್ ಅಮ್ಚೊ ಧನಿಚ್ ತುಕಾ ಆದಾರ್ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:7
40 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.


ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.


ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.


ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ


ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.


ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.


ಮೆಲ್ಕಿಜೆದೇಕನು ಎಷ್ಟು ದೊಡ್ಡವನೆಂಬುದನ್ನು ಸ್ವಲ್ಪ ಆಲೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು, ಯುದ್ಧದಲ್ಲಿ ತಾನು ಜಯಿಸಿದ್ದರಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.


ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ಪರಿಶುದ್ಧ ಜನರಾಗುವುದಕ್ಕಾಗಿ ದೇವರಿಂದ ಕರೆಯಲ್ಪಟ್ಟವರಾದ ನೀವು ಯೇಸುವನ್ನೇ ಕುರಿತು ಆಲೋಚಿಸಿರಿ. ದೇವರು ಆತನನ್ನು ನಮ್ಮ ಬಳಿಗೆ ಕಳುಹಿಸಿದನು. ಆತನೇ ನಮ್ಮ ನಂಬಿಕೆಯ ಪ್ರಧಾನಯಾಜಕನು.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.


ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.


ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;


ನಾನು ನಿನ್ನ ಸೇವಕ, ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು.


ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ. ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು, ಆಗ ಬದುಕಿಕೊಳ್ಳುವೆನು.


ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು.


ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.


ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”


ಯೆಹೋವನು ನಿನ್ನನ್ನು ಇಸ್ರೇಲರಿಗೆ ಅರಸನನ್ನಾಗಿ ಮಾಡುವನು. ನೀನು ಆತನ ಆಜ್ಞೆಗಳನ್ನು ಅನುಸರಿಸಿ, ದಕ್ಷತೆಯಿಂದ ರಾಜ್ಯಭಾರ ಮಾಡುವದಕ್ಕೆ ಬೇಕಾದ ಜ್ಞಾನವನ್ನು ನಿನಗೆ ದಯಪಾಲಿಸಲಿ.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


“ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.


ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.


“ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.


ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು