Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:16 - ಪರಿಶುದ್ದ ಬೈಬಲ್‌

16 ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೈವಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಶಿಕ್ಷೆಗೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆ ಸಗ್ಳಿ ಪವಿತ್ರ್ ಪುಸ್ತಕಾತ್ಲಿ ಶಿಕಾಪಾ ದೆವಾನ್ ಪ್ರೆರನ್ ಕರಲ್ಲ್ಯಾ ವೈನಾ ಘಡಲ್ಲಿ ಹಾತ್, ಅಶೆ ತಿ ಶಿಕಾಪಾ ಖರೆಪಾನ್ ಕಾಯ್ ಹಾಯ್ ತೆ ಶಿಕ್ವುಕ್, ಚುಕ್ ಕರಲ್ಲ್ಯಾ ತನ್ನಾ ಜೊರ್ ಕರುಕ್, ಅನಿ ಚುಕ್ ಅಸಲ್ಲೆ ಸಮಾ ಕರುಕ್, ಅನಿ ಬರೆ ಜಿವನ್ ಕರ್‍ತಲೆ ಶಿಕ್ವುಕ್ ಉಪ್‍ಯೊಗಾಕ್ ಪಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:16
43 ತಿಳಿವುಗಳ ಹೋಲಿಕೆ  

ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.


ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.


ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.


ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.


ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು.


ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು.


ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.


ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.


ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಪವಿತ್ರಾತ್ಮನ ವರವು ಕಾಣಬಲ್ಲದು. ಇತರರಿಗೆ ಸಹಾಯ ಮಾಡಲೆಂದು ಪವಿತ್ರಾತ್ಮನು ವರವನ್ನು ಕೊಡುತ್ತಾನೆ.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನೀತಿಮಾರ್ಗವನ್ನು ತೊರೆದವನಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.


ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ಆ ಮಾತುಗಳು ಬರೆಯಲ್ಪಟ್ಟಿರುವುದು ಅಬ್ರಹಾಮನಿಗೆ ಮಾತ್ರವಲ್ಲ.


ನಂಬಿಕೆ ಎಂದರೆ ನಾವು ನಿರೀಕ್ಷೆಯಿಂದಿರುವ ಸಂಗತಿಗಳಲ್ಲಿ ಭರವಸದಿಂದಿರುವುದೂ ನಮ್ಮ ಕಣ್ಣಿಗೆ ಕಾಣದಿರುವುದನ್ನು ನಿಜವೆಂದು ತಿಳಿದುಕೊಳ್ಳುವುದೂ ಆಗಿದೆ.


ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.


ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:


‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!


ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳೆದುಕೊಂಡಿದ್ದಾನೆ. ನೀವು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೆಯ ಸಂಗತಿಗಳನ್ನು ತಿಳಿಸುತ್ತಿದ್ದೆ.


ಆದರೆ ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದು ಈ ರೀತಿಯಲ್ಲೇ ಆಗಬೇಕಾಗಿದೆ” ಎಂದು ಹೇಳಿದನು.


ಆಗ ಯೇಸುವು ಫರಿಸಾಯರಿಗೆ, “ಹಾಗಾದರೆ ದಾವೀದನು ಆತನನ್ನು ‘ಪ್ರಭು’ ಎಂದು ಏಕೆ ಕರೆದನು? ದಾವೀದನು ಪರಿಶುದ್ಧಾತ್ಮನ ಶಕ್ತಿಯಿಂದ ಮಾತನಾಡಿದ್ದನು. ದಾವೀದನು ಹೇಳಿದ್ದೇನೆಂದರೆ:


“ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ. ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.


ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು