Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:2 - ಪರಿಶುದ್ದ ಬೈಬಲ್‌

2 ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮನುಷ್ಯರು ಸ್ವಾರ್ಥಚಿಂತಕರೂ ಹಣದಾಸೆಯವರೂ ಬಡಾಯಿಕೊಚ್ಚುವವರೂ ಅಹಂಕಾರಿಗಳೂ ದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಲೊಕಾ ಸ್ವಾರ್ಥಿ, ಪೈಶ್ಯಾಂಚಿ ಆಶಾ ಕರ್‍ತಲಿ, ಬಡಾಯ್ ಬೊಲ್ತಲಿ, ಅನಿ ಅಪ್ನಿಚ್ ಮೊಟೊ ಮನ್ತಲೆ; ಅನಿ ದುಸ್ರ್ಯಾಂಚೆ ಬುರ್ಶೆ ಬೊಲ್ತಲಿ, ಬಾಯ್-ಬಾಬಾಕ್ ನಿಂದ್ಯಾ ಕರ್‍ತಲಿ ಅನಿ ತೆನಿ ಹುಕುಮಾಕ್ನಿ ಕಾನ್ ದಿ ನಸ್ತಾನಾ ರ್‍ಹಾತಲೆ ಅನಿ ಪವಿತ್ರ್ ಹೊವ್ನ್ ಚಲಿನಸಲ್ಲಿ, ಉಪ್ಕಾರ್ ಕರಲ್ಲೆ ಇಸರ್ತಲಿ, ದೆವಸ್ಪಾನ್‍ನಸಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:2
43 ತಿಳಿವುಗಳ ಹೋಲಿಕೆ  

ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.


ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.


ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು.


ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.


ಆದ್ದರಿಂದ ಮುರಿಯಲ್ಪಟ್ಟ ಆ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.


ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.


ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.


ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.


ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.


ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.


ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ಅವರು ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ,


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು