Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:1 - ಪರಿಶುದ್ದ ಬೈಬಲ್‌

1 ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಅನಿ ಕ್ರಿಸ್ತ್ ಜೆಜುಚ್ಯಾ ಇದ್ರಾಕ್ ತೊ ಝಿತ್ತ್ಯಾಂಚಿ ಅನಿ ಮರಲ್ಲ್ಯಾಂಚಿ ಝಡ್ತಿ ಕರ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ರಾಜಾ ಹೊವ್ನ್ ರಾಜ್ ಚಾಲ್ವುಕ್ ಯೆತಾ. ಮಿಯಾ ತುಕಾ ಗಂಬಿರ್ ರಿತಿನ್ ಹುಕುಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:1
35 ತಿಳಿವುಗಳ ಹೋಲಿಕೆ  

“ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.


ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.


ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.


ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಆದರೆ ಅವಿಶ್ವಾಸಿಗಳು ತಾವು ಮಾಡುವ ಕಾರ್ಯಗಳ ಬಗ್ಗೆ ತಾವೇ ವಿವರಣೆಯನ್ನು ನೀಡಬೇಕಾಗುತ್ತದೆ. ಜೀವಂತವಾಗಿರುವ ಮತ್ತು ಸತ್ತಿರುವ ಜನರಿಗೆ ತೀರ್ಪು ನೀಡಲು ಸಿದ್ಧನಾಗಿರುವ ಕ್ರಿಸ್ತನಿಗೆ ಅವರು ವಿವರಣೆ ನೀಡಬೇಕಾಗುವುದು.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸುಕ್ರಿಸ್ತನ ರಾಜ್ಯದಲ್ಲಿ ನಿಮಗೆ ಮಹಾ ಸ್ವಾಗತವನ್ನು ನೀಡಲಾಗುವುದು. ಆ ರಾಜ್ಯವು ಶಾಶ್ವತವಾದದ್ದು.


ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.


“ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.


ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.


ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.


ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.


ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು