Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:5 - ಪರಿಶುದ್ದ ಬೈಬಲ್‌

5 ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತಿಯಾ ಸಗ್ಳ್ಯಾ ವಿಶಯಾತ್ನಿಬಿ ಸಂಬಾಳುನ್ ಘೆವ್ನ್ ರ್‍ಹಾಮ್; ತರಾಸ್ ಸೊಸುನ್ ಘೆವ್ನ್ ಚಲ್, ಎಕ್ ಬರಿ ಖಬರ್ ಸಾಂಗ್ತಲೊ ಮಾನುಸ್ ಹೊವ್ನ್ ರ್‍ಹಾ ಅನಿ ತುಕಾ ದಿಲ್ಲೆ ಕಾಮ್ ದೆವಾಚ್ಯಾ ಸೆವಕಾಚ್ಯಾ ಸರ್ಕೆ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:5
28 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ನಮಗಿರುವ ತೊಂದರೆಗಳಲ್ಲಿ ನೀನೂ ಪಾಲುಗಾರನಾಗು. ಕ್ರಿಸ್ತ ಯೇಸುವಿನ ನಿಜವಾದ ಸೈನಿಕನಂತೆ ಆ ತೊಂದರೆಗಳನ್ನು ಸ್ವೀಕರಿಸು.


ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.


ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.


ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ ಅವನೂ ಒಬ್ಬನಾಗಿದ್ದನು.


ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.


ಆದುದರಿಂದ ನಾವು ಇತರ ಜನರಂತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿಂದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.


ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.


ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.


ನಾನು ನಿಮಗೂ ಪ್ರತಿಯೊಬ್ಬರಿಗೂ ಹೇಳುವುದೇನೆಂದರೆ, ‘ಸಿದ್ಧರಾಗಿರಿ!’”


ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


“ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,


“ನರಪುತ್ರನೇ, ನಿನ್ನ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು, ‘ನಾನು ಈ ದೇಶದೊಂದಿಗೆ ಯುದ್ಧ ಮಾಡಲು ಶತ್ರು ಸೈನಿಕರನ್ನು ಬರಮಾಡುತ್ತೇನೆ. ಈ ಸಮಯದಲ್ಲಿ ಜನರು ಒಬ್ಬ ಕಾವಲುಗಾರನನ್ನು ಆರಿಸುವರು.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


“ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು.


ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು