Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:3 - ಪರಿಶುದ್ದ ಬೈಬಲ್‌

3 ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ಸಗ್ಳ್ಯಾ ಎಳಾರ್ ದೆವಾಕ್ ಧನ್ಯವಾದ್ ದಿತಾಂವ್. ಅನಿ ಅಶೆ ಅಮಿ ಕರುಕುಚ್ ಪಾಜೆ. ಕಶ್ಯಾಕ್ ಮಟ್ಲ್ಯಾರ್, ತುಮ್ಚೊ ವಿಶ್ವಾಸ್ ವಾಡುನ್ಗೆತುಚ್ ಜಾವ್ಕ್ ಲಾಗ್ಲಾ, ಅನಿ ತುಮ್ಚ್ಯಾ ಎಕಾಮೆಕಾಂಚ್ಯಾ ಮದ್ದಿ ಹೊತ್ತೊ ಪ್ರೆಮ್ ಅನಿಉಲ್ಲೊ ಘಟ್ ಹೊವ್ನಗೆತುಚ್ ಜಾವ್ಕ್ ಲಾಗ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:3
26 ತಿಳಿವುಗಳ ಹೋಲಿಕೆ  

ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು.


ನಾವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ಪ್ರೀತಿಯು ವೃದ್ಧಿಯಾಗಿ ಒಬ್ಬೊಬ್ಬರ ಮೇಲೆಯೂ ಇತರ ಜನರೆಲ್ಲರ ಮೇಲೆಯೂ ಹೆಚ್ಚಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ನಿಮ್ಮ ನಿಮಿತ್ತದಿಂದ ದೇವರ ಸನ್ನಿಧಿಯಲ್ಲಿ ಬಹಳ ಹರ್ಷಿತರಾಗಿದ್ದೇವೆ! ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಮಗಿರುವ ಆನಂದಕ್ಕೆ ಸರಿಸಮವಾಗಿ ಕೃತಜ್ಞತಾಸ್ತುತಿ ಸಲ್ಲಿಸಲು ನಮಗೆ ಹೇಗೆ ಸಾಧ್ಯವಾದೀತು?


ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.


ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.


ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಪ್ರತಿಯೊಂದು ವಿಷಯದಲ್ಲಿಯೂ ತಂದೆಯಾದ ದೇವರಿಗೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ಯಾವಾಗಲೂ ಸ್ತೋತ್ರಮಾಡಿರಿ.


ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅಪೊಸ್ತಲರು ಪ್ರಭುವಿಗೆ (ಯೇಸು), “ನಮ್ಮ ನಂಬಿಕೆಯನ್ನು ಹೆಚ್ಚಿಸು!” ಎಂದು ಕೇಳಿಕೊಂಡರು.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ನಾವು ಹೊಗಳಿಕೊಳ್ಳುವುದನ್ನು ನಮ್ಮ ಕೆಲಸದ ಮೇರೆಗೆ ಸೀಮಿತಗೊಳಿಸುತ್ತೇವೆ. ಇತರರು ಮಾಡಿದ ಕೆಲಸದ ಬಗ್ಗೆ ನಾವು ನಮ್ಮನ್ನು ಹೊಗಳಿಕೊಳ್ಳುವುದಿಲ್ಲ. ನಿಮ್ಮ ನಂಬಿಕೆಯು ವೃದ್ಧಿಯಾಗುತ್ತಾ ಬಂದಂತೆ ನಮ್ಮ ಕೆಲಸವು ಮತ್ತಷ್ಟು ವಿಶಾಲವಾಗಿ ಬೆಳೆಯಲು ನೀವು ಸಹಾಯ ಮಾಡುತ್ತೀರೆಂಬ ನಿರೀಕ್ಷೆ ನಮಗಿದೆ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು