Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:9 - ಪರಿಶುದ್ದ ಬೈಬಲ್‌

9 ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಆ ದಿನದಲ್ಲಿ ಆತನು ತನ್ನ ಪವಿತ್ರರ ಮೂಲಕ ಪ್ರಭಾವ ಹೊಂದುವವನಾಗಿಯೂ ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವವನಾಗಿಯೂ ಬರುವಾಗ ಅಂಥವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಂಕಾ ಧನಿಯಾಚ್ಯಾ ಇದ್ರಾಕ್ ನಾ ಅನಿ ತೆಚ್ಯಾ ಮೊಟ್ಯಾ ಮಹಿಮೆತ್ನಾ ಕಾಡುನ್ ಕನ್ನಾಚ್ ಕಮಿ ಹೊಯ್ನಸಲ್ಲ್ಯಾ ನಾಸಾಚ್ಯಾ ಶಿಕ್ಷಾತ್ ಘಾಲುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:9
38 ತಿಳಿವುಗಳ ಹೋಲಿಕೆ  

“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.


ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು.


ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು.


ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.


ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.


ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


“ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.


ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.


ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; ಸರ್ವಶಕ್ತನಾದ ದೇವರು ನಮಗೇನೂ ಮಾಡಲಾರನು!’ ಎಂದು ಹೇಳಿದ್ದರು.


ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.


ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.


ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು