Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:1 - ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವುದನ್ನು ಕುರಿತು ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾವೆಲ್ಲರೂ ಒಟ್ಟಾಗಿ ಸೇರಿ ಆತನನ್ನು ಸಂಧಿಸುವ ಕಾಲವನ್ನು ಕುರಿತು ನಿಮ್ಮೊಡನೆ ಮಾತನಾಡಲು ಇಚ್ಛಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾ- ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಯೆತಲ್ಯಾ ವಿಶಯಾತ್ ಅನಿ ಅಮಿ ತೆಚ್ಯಾ ಭೊತ್ಯಾನಿ ಗೊಳಾ ಹೊತಲ್ಯಾ ವಿಶಯಾತ್ ಅಮ್ಕಾ ತುಮ್ಚ್ಯಾಕ್ಡೆ ಬೊಲ್ತಲೆ ಹಾಯ್. ಹೆಚ್ಯಾ ವಿಶಯಾತ್ ಅಮಿ ತುಮ್ಚ್ಯಾ ಕಡೆ ಅಶೆ ಮಾಗ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:1
14 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.


ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.


ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;


ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.


ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಈಗ ಇಲ್ಲಿ ನಿಂತಿರುವ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದೊಡನೆ ಬರುವುದನ್ನು ನೋಡುವ ತನಕ ಸಾಯುವುದಿಲ್ಲ” ಎಂದು ಹೇಳಿದನು.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು