Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:12 - ಪರಿಶುದ್ದ ಬೈಬಲ್‌

12 ಸತ್ಯವನ್ನು ನಂಬದೆ, ಕೆಟ್ಟಕಾರ್ಯಗಳನ್ನು ಮಾಡುವುದರಲ್ಲಿ ಸಂತೋಷಪಡುವ ಜನರೆಲ್ಲರೂ ದಂಡನೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ, ಖರೆ ಮಾನುನ್ ಘೆಯ್ನಸ್ತಾನಾ ಪಾಪಾತ್ ಕುಶಿ ಹೊವ್ನ್ ಜಿವನ್ ಕರ್‍ತಲ್ಯಾಂಚ್ಯಾ ವರ್‍ತಿ ದೆವಾಚಿ ಶಿಕ್ಷಾ ಉತ್ರುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:12
21 ತಿಳಿವುಗಳ ಹೋಲಿಕೆ  

ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.


ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಅವರ ದುಷ್ಟತನವು ಅವರ ಅರಸರನ್ನು ಸಂತಸಗೊಳಿಸುತ್ತದೆ. ಅವರ ಸುಳ್ಳುಗಳು ಅವರ ನಾಯಕರನ್ನು ಸಂತೋಷಪಡಿಸುತ್ತವೆ.


ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು.


ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ನೀವು ಶಿಷ್ಟತನವನ್ನು ದ್ವೇಷಿಸಿ ದುಷ್ಟತನವನ್ನು ಪ್ರೀತಿಸುತ್ತೀರಿ! ನೀವು ಜನರ ಚರ್ಮವನ್ನು ಸುಲಿಯುತ್ತಾ ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತೆಗೆಯುತ್ತೀರಿ.


ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’


ಪ್ರೀತಿಯು ಕೆಟ್ಟದ್ದರ ಬಗ್ಗೆ ಸಂತೋಷಪಡದೆ ಸತ್ಯದ ಬಗ್ಗೆ ಸಂತೋಷಪಡುತ್ತದೆ.


ಸತ್ಯವನ್ನು ಪ್ರೀತಿಸದೆ ತಪ್ಪಿಹೋಗಿರುವ ಜನರನ್ನು ಮೋಸಗೊಳಿಸಲು, ಅವನು ಎಲ್ಲಾ ವಿಧವಾದ ತಂತ್ರಗಳನ್ನು ಮಾಡುವನು. (ಅವರು ಸತ್ಯವನ್ನು ಪ್ರೀತಿಸಿದ್ದರೆ, ರಕ್ಷಣೆ ಹೊಂದುತ್ತಿದ್ದರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು