Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:1 - ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಕ್ರಿಕ್ ಅಮ್ಚ್ಯಾ ಭಾವಾ-ಭೆನಿಯಾನು, ಅಮ್ಚ್ಯಾಸಾಟ್ನಿ ಮಾಗ್ನಿ ಕರಾ. ತುಮ್ಚ್ಯಾ ಮದ್ದಿ ಕಶೆ ಧನಿಯಾಚಿ ಖಬರ್ ಪಾವ್ಲಿ, ಅನಿ ತಿಕಾ ತುಮಿ ಕಶೆ ಮಾನ್ ದಿಲ್ಯಾಸಿ ತಸೆಚ್ ತಿ ಲಗ್ಗು-ಲಗ್ಗುನಾ ಸಗ್ಳ್ಯಾಕ್ಡೆ ಜಾವ್ನ್ ಪಾವುಂದಿ, ಅನಿ ತಿಕಾ ಮಾನ್ ದಿವ್ನ್ ಸ್ವಿಕಾರ್ ಕರಿ ಸರ್ಕೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:1
22 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ದಯಮಾಡಿ ನಮಗಾಗಿ ಪ್ರಾರ್ಥಿಸಿರಿ.


ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.


ಯಾಕೆಂದರೆ ಮಹತ್ವವಾದ ಮತ್ತು ಫಲಭರಿತವಾದ ಸೇವೆಯನ್ನು ಮಾಡಲು ಇಲ್ಲಿ ನನಗೆ ಒಳ್ಳೆಯ ಅವಕಾಶಗಳಿವೆ. ಆದರೂ ಇಲ್ಲಿ ನನಗೆ ಅನೇಕ ವಿರೋಧಿಗಳಿದ್ದಾರೆ.


ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.


ಹೀಗೆ ಪ್ರಭುವಿನ ವಾಕ್ಯವು ಶಕ್ತಿಯುತವಾದ ರೀತಿಯಲ್ಲಿ ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದಾಗಿ ಹೆಚ್ಚುಹೆಚ್ಚು ಜನರು ನಂಬಿಕೊಂಡರು.


ದೇವರ ಸಂದೇಶವು ಹಬ್ಬುತ್ತಿತ್ತು ಮತ್ತು ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದ ವಿಶ್ವಾಸಿಗಳ ಸಮುದಾಯವು ದೊಡ್ಡದಾಗತೊಡಗಿತು.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಸಹೋದರ ಸಹೋದರಿಯರೇ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲ ಎಂಬುದು ನಿಮಗೆ ತಿಳಿದಿದೆ.


ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.


ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.


ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.


ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.


ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು