Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:12 - ಪರಿಶುದ್ದ ಬೈಬಲ್‌

12 ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥವರು ತಮ್ಮ ಕೆಲಸವನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಮಿ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಅಸ್ಲ್ಯಾ ಲೊಕಾಕ್ನಿ ಉಶಾರ್ಕಿ ದಿವ್ನ್ ಹುಕುಮ್ ಕರ್ತಾಂವ್. ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ಲ್ಯಾ ಕಾಮಾಕ್ನಿ ಅನಿ ಅಪ್ಲ್ಯಾ ಜಿವನಾಕ್ ಪಾಜೆ ಹೊಲ್ಲೆ ಅಪ್ನಿಚ್ ರಾಬುನ್ ಕಮ್ವುನ್ ಘೆಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:12
9 ತಿಳಿವುಗಳ ಹೋಲಿಕೆ  

ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.


ಇದೇನೊ ನಿಜವಿರಬಹುದು. ಆದರೆ ದುರಾಶೆಪಡುವುದಕ್ಕಿಂತ ಇರುವುದರಲ್ಲಿ ತೃಪ್ತರಾಗಿರುವುದೇ ಮೇಲು.


ಜಗಳದ ಮನೆಯಲ್ಲಿ ಮೃಷ್ಠಾನ್ನ ತಿನ್ನುವುದಕ್ಕಿಂತಲೂ ಸಮಾಧಾನದ ಮನೆಯಲ್ಲಿ ಒಣರೊಟ್ಟಿಯನ್ನು ತಿನ್ನುವುದೇ ಮೇಲು.


ನಮ್ಮಲ್ಲಿ ಶಾಂತಿ ಸಮಾಧಾನಗಳು ನೆಲಸಿ ನಾವು ದೇವರನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಆರಾಧಿಸಲು ಸಾಧ್ಯವಾಗುವಂತೆ ಅರಸರಿಗಾಗಿಯೂ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು