Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:3 - ಪರಿಶುದ್ದ ಬೈಬಲ್‌

3 ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ, ಧನಿ ವಿಶ್ವಾಸಿ,ತೊ ತುಮ್ಕಾ ತಾಕತ್ ದಿತಾ ಅನಿ ವಾಯ್ಟಾನಿತ್ನಾ ರಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:3
16 ತಿಳಿವುಗಳ ಹೋಲಿಕೆ  

ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.


ನಿಮ್ಮನ್ನು ಕರೆಯುವಾತನೇ ಅದನ್ನು ನಿಮಗಾಗಿ ಮಾಡುತ್ತಾನೆ. ಆತನು ನಂಬಿಗಸ್ತನು.


ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.


ಯೆಹೋವನು ನಿನ್ನನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವನು; ನಿನ್ನ ಪ್ರಾಣವನ್ನು ಕಾಯುವನು.


ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.


“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವಂತೆ ನಮ್ಮಪಾಪಗಳನ್ನೂ ಕ್ಷಮಿಸು. ನಮ್ಮನ್ನು ಶೋಧನೆಗೆ ಒಳಪಡಿಸಬೇಡ.’”


ಹೌದಾದರೆ ‘ಹೌದು’ ಎನ್ನಿರಿ. ಇಲ್ಲವಾದರೆ ‘ಇಲ್ಲ’ ಎನ್ನಿರಿ. ನೀವು ಇದಕ್ಕಿಂತ ಹೆಚ್ಚಾಗಿ ಹೇಳುವಂಥದ್ದು ಸೈತಾನನಿಂದ ಪ್ರೇರಿತವಾದದ್ದು.


ಯಾಬೇಚನು ಇಸ್ರೇಲರ ದೇವರಿಗೆ ಹೀಗೆ ಪ್ರಾರ್ಥಿಸಿದನು: “ದೇವರೇ, ನೀನು ನನ್ನನ್ನು ನಿಜವಾಗಿಯೂ ಆಶೀರ್ವದಿಸು. ನನ್ನ ಪ್ರಾಂತ್ಯವನ್ನು ವಿಸ್ತರಿಸು. ನನ್ನ ಬಳಿಯಲ್ಲಿಯೇ ಇದ್ದು ನನಗಾರೂ ನೋವು ಮಾಡದಂತೆ ನೋಡಿಕೊಂಡು ನನ್ನನ್ನು ರಕ್ಷಿಸು” ಎಂಬ ಯಾಬೇಚನ ಕೋರಿಕೆಯನ್ನು ದೇವರು ಕೇಳಿದನು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು