Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:15 - ಪರಿಶುದ್ದ ಬೈಬಲ್‌

15 ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಬಂಗಾರವು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:15
10 ತಿಳಿವುಗಳ ಹೋಲಿಕೆ  

ಸೊಲೊಮೋನನಿಂದಾಗಿ ಜೆರುಸಲೇಮಿನಲ್ಲಿ ಬೆಳ್ಳಿಯು ಹೆಚ್ಚಾಗಿ, ಕಲ್ಲುಗಳಷ್ಟು ಸಾಮಾನ್ಯವಾಗಿತ್ತು. ಮಾತ್ರವಲ್ಲದೆ ದೇವದಾರು ಮರಗಳು ಬೆಟ್ಟಪ್ರದೇಶದಲ್ಲಿ ಬೆಳೆಯುವ ಸಿಕಮೋರ್ ಮರಗಳಂತೆ ಧಾರಾಳವಾಗಿದ್ದವು.


ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.


“ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.


“ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”


ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲಿ ಘನತೆಯಾಗಲಿ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು.


ಆದ್ದರಿಂದ ಅವನು ಬೇರೊಂದು ಸ್ಥಳಕ್ಕೆ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿ ಕುಳಿತುಕೊಂಡನು. ಯೇಸು ಆ ಸ್ಥಳದ ಮೂಲಕ ಹೋಗುವನೆಂದು ಜಕ್ಕಾಯನಿಗೆ ಗೊತ್ತಿತ್ತು.


ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.


ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು