Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:4 - ಪರಿಶುದ್ದ ಬೈಬಲ್‌

4 ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ತಂದು ಅಲ್ಲಿ ತಾನು ಅದಕ್ಕಾಗಿ ಏರ್ಪಡಿಸಿದ್ದ ಸ್ಥಳದಲ್ಲಿ ಪ್ರತಿಷ್ಠಿಸಿದನು; ಮತ್ತು ಅದಕ್ಕೆ ಗುಡಾರವನ್ನು ನಿರ್ಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತಾನು ಯೆರೂಸಲೇವಿುನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿಟ್ಟ ಡೇರೆಗೆ ತೆಗೆದುಕೊಂಡು ಬಂದಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:4
12 ತಿಳಿವುಗಳ ಹೋಲಿಕೆ  

ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.


ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.


ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.


ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.


ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.


ನಾನು ನಿನಗೋಸ್ಕರ ಆಲಯವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಲಿ” ಎಂದು ಪ್ರಾರ್ಥಿಸಿದನು.


ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.


ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು