Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:8 - ಪರಿಶುದ್ದ ಬೈಬಲ್‌

8 ಆದರೆ ರೆಹಬ್ಬಾಮನು ಹಿರಿಯರ ಸಲಹೆಯನ್ನು ಕೇಳಲಿಲ್ಲ. ಅವನೊಂದಿಗೆ ಬೆಳೆದ ಅವನ ಸಮಪ್ರಾಯದ ಯೌವನಸ್ಥರನ್ನು ವಿಚಾರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡಲೇ ಬೆಳೆದು ತನಗೆ ಮಂತ್ರಿಗಳೂ ಆದ ಯೌವನಸ್ಥರನ್ನು ಕರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:8
12 ತಿಳಿವುಗಳ ಹೋಲಿಕೆ  

ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.


ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲ, “ಅರ್ಕೀಯನಾದ ಹೂಷೈಯನ ಸಲಹೆಯು ಅಹೀತೋಫೆಲನ ಸಲಹೆಗಿಂತ ಉತ್ತಮವಾಗಿದೆ” ಎಂದು ಹೇಳಿದರು. ಇದು ಯೆಹೋವನ ಯೋಜನೆಯಾಗಿದ್ದ ಕಾರಣ ಅವರು ಹಾಗೆ ಹೇಳಿದರು. ಅಹೀತೋಫೆಲನ ಒಳ್ಳೆಯ ಸಲಹೆಯನ್ನು ನಾಶಗೊಳಿಸಲು ಯೆಹೋವನು ಈ ಯೋಜನೆಯನ್ನು ಮಾಡಿದ್ದನು. ಹೀಗೆ ಯೆಹೋವನು ಅಬ್ಷಾಲೋಮನನ್ನು ದಂಡಿಸಲಿದ್ದನು.


ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.


ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು.


ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.


ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.


ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ನೀನು ಜ್ಞಾನಿಗೆ ಉಪದೇಶಿಸಿದರೆ ಅವನು ಮತ್ತಷ್ಟು ಜ್ಞಾನಿಯಾಗುವನು. ನೀನು ನೀತಿವಂತನಿಗೆ ಬೋಧಿಸಿದರೆ, ಅವನು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳುವನು.


“ನನ್ನ ತಂದೆಯು ಅವರಿಗೆ ಕೊಟ್ಟ ಭಾರವನ್ನು ಹಗುರ ಮಾಡಲು ಜನರು ಕೇಳುತ್ತಿದ್ದಾರೆ. ನಾನು ಅವರಿಗೆ ಏನು ಉತ್ತರಕೊಡಬೇಕು?” ಎಂದು ಕೇಳಿದನು.


ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು