Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:10 - ಪರಿಶುದ್ದ ಬೈಬಲ್‌

10 ರೆಹಬ್ಬಾಮನು ಬಂಗಾರದ ಗುರಾಣಿಗಳ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ ರಾಜನ ಅರಮನೆಯನ್ನು ಕಾಯುವ ಕಾವಲುಗಾರರ ವಶಕ್ಕೆ ಅವುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:10
9 ತಿಳಿವುಗಳ ಹೋಲಿಕೆ  

ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಬೆನಾಯನು ಮೂವತ್ತು ಪರಾಕ್ರಮಿಗಳಿಗಿಂತಲೂ ಹೆಚ್ಚು ಹೆಸರುವಾಸಿಯಾಗಿದ್ದನು. ಆದರೆ ಇವನು ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ಇವನನ್ನು ಅಂಗರಕ್ಷಕರಿಗೆ ನಾಯಕನನ್ನಾಗಿ ಮಾಡಿದನು.


ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.


ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ರಾಜನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ದೊಡ್ಡ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ಏಳು ಕಿಲೋಗ್ರಾಂ ಬಂಗಾರವಿತ್ತು.


ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲಿಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯದಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು.


ರಾಜನು ದೇವಾಲಯವನ್ನು ಪ್ರವೇಶಿಸುವಾಗ, ಕಾವಲುಗಾರರು ಆ ಗುರಾಣಿಗಳನ್ನು ಹೊರತರುವರು. ತರುವಾಯ ಅವುಗಳನ್ನು ಮೊದಲಿದ್ದ ಸ್ಥಳದಲ್ಲಿಯೇ ಇಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು