Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:2 - ಪರಿಶುದ್ದ ಬೈಬಲ್‌

2 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಯೆಹೋವನಿಗೆ ದ್ರೋಹಿಗಳಾದದರಿಂದ ಅರಸನಾದ ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:2
17 ತಿಳಿವುಗಳ ಹೋಲಿಕೆ  

ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೊಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು.


ನಮ್ಮ ಹೃದಯಗಳಲ್ಲಿ ಆನಂದವೇ ಉಳಿದಿಲ್ಲ. ನಮ್ಮ ನರ್ತನದ ಸ್ಥಾನವನ್ನು ಗೋಳಾಟವು ಆವರಿಸಿಕೊಂಡಿದೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು.


ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.


ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು.


ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು