Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:5 - ಪರಿಶುದ್ದ ಬೈಬಲ್‌

5 ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನಿಗೆ ಹೆದರಿ ಯೆರೂಸಲೇವಿುನಲ್ಲಿ ಕೂಡಿದ್ದ ಯೆಹೂದ್ಯಪ್ರಧಾನರ ಬಳಿಗೂ ಬಂದು ಅವರಿಗೆ - ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟು ಬಿಟ್ಟಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:5
15 ತಿಳಿವುಗಳ ಹೋಲಿಕೆ  

ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು,


ಆದರೆ ಯೆಹೋವನು ದೇವರ ಮನುಷ್ಯನೊಬ್ಬನೊಡನೆ ಮಾತನಾಡಿದನು. ಅವನ ಹೆಸರು ಶೆಮಾಯ. ಯೆಹೋವನು,


“ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ.


ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”


“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಆದರೆ ಯೆಹೋವನು ನೀತಿವಂತರನ್ನು ತೊರೆದುಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು.


ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು