2 ಪೂರ್ವಕಾಲ ವೃತ್ತಾಂತ 12:6 - ಪರಿಶುದ್ದ ಬೈಬಲ್6 ಆಗ ಯೆಹೂದ ಪ್ರಾಂತ್ಯದ ನಾಯಕರುಗಳೂ ರೆಹಬ್ಬಾಮನೂ ತಾವು ಮಾಡಿದ ತಪ್ಪಿಗೆ ಪಶ್ಚಾತ್ತಾಪಪಟ್ಟು ತಮ್ಮನ್ನು ದೇವರ ಮುಂದೆ ತಗ್ಗಿಸಿಕೊಂಡರು. “ಯೆಹೋವನು ನೀತಿವಂತನೇ ಸರಿ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಅರಸನೂ ಇಸ್ರಯೇಲ್ ಪ್ರಧಾನರೂ, ಸರ್ವೇಶ್ವರಸ್ವಾಮಿ ನ್ಯಾಯವಂತರೆಂದು ಒಪ್ಪಿಕೊಂಡು ತಮ್ಮನ್ನೇ ತಗ್ಗಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅರಸನೂ ಇಸ್ರಾಯೇಲ್ ಪ್ರಧಾನರೂ ಯೆಹೋವನು ನ್ಯಾಯವಂತನೆಂದು ಒಪ್ಪಿ ತಮ್ಮನ್ನು ತಗ್ಗಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು. ಅಧ್ಯಾಯವನ್ನು ನೋಡಿ |
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
ಆಗ ಬೆಜೆಕ್ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.