10 “ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.
10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
10 ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.
10 ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡಿಸುವ ಆರೋನನ ಸಂತಾನದವರಾದ ಯಾಜಕರೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿರುತ್ತಾರೆ.
10 “ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.
ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ.
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.”
ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.