Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:14 - ಪರಿಶುದ್ದ ಬೈಬಲ್‌

14 ಅಬೀಯನ ಸೈನ್ಯವು ಸುತ್ತಲೂ ನೋಡಿದಾಗ ವೈರಿಗಳ ಸೈನ್ಯವು ಮುಂದೆಯೂ ಹಿಂದೆಯೂ ಯುದ್ಧಮಾಡುತ್ತಿರುವದನ್ನು ನೋಡಿ ಯೆಹೋವನನ್ನು ಕೂಗಿದರು. ಯಾಜಕರು ತುತ್ತೂರಿಯನ್ನೂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧಪ್ರಾರಂಭವಾಗಿರುವದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತೂರಿಗಳನ್ನು ಊದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:14
12 ತಿಳಿವುಗಳ ಹೋಲಿಕೆ  

ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.


ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


“ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.


ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು.


ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ಈ ನಗರವನ್ನು ನಿಮಗೆ ಕೊಟ್ಟಿದ್ದಾನೆ.


“ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ತಮಗೆ ಬಂದೊದಗಿದ ಸಮಸ್ಯೆಗಾಗಿ ಪರಲೋಕದ ಕಡೆಗೆ ನೋಡಿ ಗಟ್ಟಿಯಾಗಿ ಪ್ರಾರ್ಥಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು