Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:16 - ಪರಿಶುದ್ದ ಬೈಬಲ್‌

16 ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗಾಗಿ ಇಸ್ರಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್ಯರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಇವರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಸ್ರಾಯೇಲರು ಯೆಹೂದದವರ ಎದುರಿನಿಂದ ಓಡಿಹೋದರು. ಹೀಗೆ ದೇವರು ಇಸ್ರಾಯೇಲರನ್ನು ಯೆಹೂದದವರ ಕೈಯಲ್ಲಿ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:16
10 ತಿಳಿವುಗಳ ಹೋಲಿಕೆ  

ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅಪರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು.


ದಾವೀದನು ಈಗ ಕೆಯೀಲಾದಲ್ಲಿದ್ದಾನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು, “ದೇವರು ದಾವೀದನನ್ನು ನನಗೆ ಕೊಟ್ಟಿದ್ದಾನೆ! ದಾವೀದನು ತಾನಾಗಿಯೇ ಸಿಕ್ಕಿಹಾಕಿಕೊಂಡಿದ್ದಾನೆ. ಅವನು, ಬಾಗಿಲುಗಳಿರುವ ಹಾಗೂ ಕಬ್ಬಿಣದ ಸಲಾಕೆಗಳಿಂದ ಬೀಗ ಹಾಕಬಲ್ಲ ಬಾಗಿಲುಗಳಿರುವ ಪಟ್ಟಣದೊಳಕ್ಕೆ ಹೋಗಿದ್ದಾನೆ” ಎಂದು ಹೇಳಿದನು.


ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದ್ದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು.


ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸುವುದರಲ್ಲಿ ಯೆಹೂದ್ಯರಿಗೆ ಸಹಾಯ ಮಾಡಿದನು. ಯೆಹೂದ್ಯರು ಬೆಜೆಕ್ ನಗರದಲ್ಲಿ ಹತ್ತು ಸಾವಿರ ಜನರನ್ನು ಕೊಂದುಹಾಕಿದರು.


ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.


ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”


“ಅದೇ ಪ್ರಕಾರ ನಾವು ಓಗನನ್ನು ಸೋಲಿಸುವಂತೆ ದೇವರಾದ ಯೆಹೋವನು ಸಹಾಯ ಮಾಡಿದನು. ಅವನನ್ನೂ ಅವನ ಸೈನದಲ್ಲಿರುವವರನ್ನೆಲ್ಲಾ ನಾಶಮಾಡಿದೆವು.


ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.


ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.


ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು