Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:19 - ಪರಿಶುದ್ದ ಬೈಬಲ್‌

19 ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:19
11 ತಿಳಿವುಗಳ ಹೋಲಿಕೆ  

ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.


ಅಲ್ಲಿಂದ ಆ ಸೀಮೆಯು ನೆಫ್ತೋಹ ಬುಗ್ಗೆಗೆ ಹೋಗುತ್ತದೆ; ಅಲ್ಲಿಂದ ಎಫ್ರೋನ್ ಬೆಟ್ಟದ ಸಮೀಪದ ನಗರಗಳಿಗೆ ಹೋಗುತ್ತದೆ; ಅಲ್ಲಿಂದ ತಿರುಗಿ “ಬಾಲಾ” ಎಂಬ ಊರಿಗೆ ಹೋಗುತ್ತದೆ. (ಬಾಲಾವನ್ನು ಕಿರ್ಯತ್ಯಾರೀಮ್ ಎಂದೂ ಕರೆಯುತ್ತಾರೆ.)


ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.


ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.


ಯೆಹೋಶುವನು ಈ ಎಲ್ಲ ಪಟ್ಟಣಗಳನ್ನು ವಶಪಡಿಸಿಕೊಂಡನು; ಅವುಗಳ ಎಲ್ಲ ಅರಸರನ್ನು ಕೊಂದುಹಾಕಿದನು; ಈ ಪಟ್ಟಣಗಳಲ್ಲಿದ್ದ ಎಲ್ಲವನ್ನು ನಾಶಮಾಡಿದನು. ಯೆಹೋವನ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆಯೇ ಅವನು ಮಾಡಿದನು.


ಅವರು ಆ ಪಟ್ಟಣವನ್ನೂ ಅದರ ಅರಸನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಆ ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ್ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು.


ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು.


ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.


ಅಬೀಯನಿರುವಷ್ಟು ಕಾಲ ಯಾರೊಬ್ಬಾಮನು ಮತ್ತೆ ಬಲಗೊಳ್ಳಲೇ ಇಲ್ಲ. ಯೆಹೋವನು ಯಾರೊಬ್ಬಾಮನನ್ನು ಸಾಯಿಸಿದನು.


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು