Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:13 - ಪರಿಶುದ್ದ ಬೈಬಲ್‌

13 ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೂಷ್ಯರು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ಚೂರು ಚೂರಾದರು. ಇಸ್ರಾಯೇಲ್ಯರಿಗೆ ಅಪರಿವಿುತವಾದ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:13
17 ತಿಳಿವುಗಳ ಹೋಲಿಕೆ  

ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.


ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.


ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.


ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ದೇವರೇ, ನೀನು ನಮ್ಮನ್ನು ತ್ಯಜಿಸಿ, ನಮ್ಮ ಸೈನ್ಯದೊಡನೆ ಹೋಗದಿರುವುದು ನಿಜವೇ?


ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.


ನನ್ನನ್ನು ಜಜ್ಜಿಹಾಕಲು ದೇವರು ಇಚ್ಫಿಸುವುದಾಗಿದ್ದರೆ, ಆತನು ನನ್ನನ್ನು ಕೊಲ್ಲಲಿ!


ದಿನದಿಂದ ದಿನಕ್ಕೆ ಹೆಚ್ಚೆಚ್ಚು ಜನರು ಬಂದು ದಾವೀದನನ್ನು ಸೇರಿಕೊಂಡಿದ್ದರಿಂದ ದಾವೀದನ ಸೈನ್ಯವು ಬಲಗೊಂಡಿತು.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:


ಶೀಶಕನ ಬಳಿಯಲ್ಲಿ ಹನ್ನೆರಡು ಸಾವಿರ ರಥಗಳು, ಅರವತ್ತುಸಾವಿರ ರಾಹುತರು ಮತ್ತು ಲೆಕ್ಕಿಸಲಾರದಷ್ಟು ಸೈನಿಕರು ಇದ್ದರು. ಅವನ ಆ ದೊಡ್ಡ ಸೈನ್ಯದಲ್ಲಿ ಲಿಬ್ಯ, ಇಥಿಯೋಪ್ಯ ಮತ್ತು ಸುಕ್ಕೀಯ ದೇಶದ ಸಿಪಾಯಿಗಳಿದ್ದರು.


ಆ ಸಮಯದಲ್ಲಿ ಅವರು ಏಳುನೂರು ಹೋರಿಗಳನ್ನೂ ಏಳುಸಾವಿರ ಆಡುಕುರಿಗಳನ್ನೂ, ಯೆಹೋವನಿಗೆ ಸಮರ್ಪಿಸಿದರು. ಇವುಗಳನ್ನು ಆಸನ ಸೈನ್ಯವು ಶತ್ರುಗಳಿಂದ ಸುಲಿದುಕೊಂಡಿದ್ದರು.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.


ಯೆಹೋವನು ಇಸ್ರೇಲರ ವೈರಿಗಳಿಗೆ ವಿರುದ್ಧವಾಗಿ ಯುದ್ಧ ಮಾಡಿದನೆಂದು ಕೇಳಿ ಎಲ್ಲಾ ದೇಶಗಳವರು ಆತನಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು