Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:9 - ಪರಿಶುದ್ದ ಬೈಬಲ್‌

9 ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:9
12 ತಿಳಿವುಗಳ ಹೋಲಿಕೆ  

ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅಪರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು.


ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.


ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವದು.


“‘ಅನೇಕ ದೇಶಗಳವರು ಈಜಿಪ್ಟಿನವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇಥಿಯೋಪ್ಯ, ಪೂಟ್, ಲೂದ್, ಅರೇಬಿಯ, ಲಿಬ್ಯ ಮತ್ತು ಇಸ್ರೇಲಿನ ಜನರು ಇವರೆಲ್ಲರೂ ನಾಶವಾಗುವರು.


ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.


ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.


ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು