Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:12 - ಪರಿಶುದ್ದ ಬೈಬಲ್‌

12 ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:12
22 ತಿಳಿವುಗಳ ಹೋಲಿಕೆ  

“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.


ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


“ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.


ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ಅವರು ಆ ದೂರದ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಿಗಳಾದೆವು ಎಂದು ಒಪ್ಪಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿನ್ನಲ್ಲಿ ಪ್ರಾರ್ಥಿಸುವುದಾದರೆ,


ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ.


ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.


ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು