Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:8 - ಪರಿಶುದ್ದ ಬೈಬಲ್‌

8 ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:8
24 ತಿಳಿವುಗಳ ಹೋಲಿಕೆ  

ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.


ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು.


ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.


ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.


ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.


ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಬಗೆಯ ಕ್ರಿಮಿಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.


ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು, ತುರಾಯಿ ಮರಗಳನ್ನು, ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.)


ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನೂ ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನೂ ಶುದ್ಧ ಮಾಡಿದೆವು.


“ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.


ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”


ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.


ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷೆಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಈ ಜನರನ್ನೆಲ್ಲ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು.


ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.


ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ರಾಜನಾದನು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು