Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:9 - ಪರಿಶುದ್ದ ಬೈಬಲ್‌

9 ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವದನ್ನು ನೋಡಿ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದದೇಶದಲ್ಲಿ ಇಳಕೊಂಡಿದ್ದ ಎಫ್ರಾಯೀಮ್ ಮನಸ್ಸೆ ಸಿಮೆಯೋನ್ ಕುಲಗಳವರನ್ನೂ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:9
15 ತಿಳಿವುಗಳ ಹೋಲಿಕೆ  

ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.


ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.


ಹೀಗೆ ದಾವೀದನ ಕುಟುಂಬಕ್ಕೆ ವಿರೋಧವಾಗಿ ಇಸ್ರೇಲರು ದಂಗೆ ಎದ್ದರು. ಅವರು ಇಂದಿಗೂ ದಾವೀದನ ಕುಟುಂಬದ ವಿರೋಧಿಗಳಾಗಿದ್ದಾರೆ.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.


ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು.


“ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ.


ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.


ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷೆಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಈ ಜನರನ್ನೆಲ್ಲ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು