Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:10 - ಪರಿಶುದ್ದ ಬೈಬಲ್‌

10 ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:10
24 ತಿಳಿವುಗಳ ಹೋಲಿಕೆ  

ಅವರಿಗೆ “ಮೀಕಾಯೆಹುವನ್ನು ಸೆರೆಮನೆಗೆ ಹಾಕಿ. ನಾನು ಯುದ್ಧದಿಂದ ಸುರಕ್ಷಿತವಾಗಿ ಹಿಂತಿರುಗುವ ತನಕ ಬರಿ ರೊಟ್ಟಿ ಮತ್ತು ನೀರನ್ನು ಮಾತ್ರ ಅವನಿಗೆ ಕೊಡಿ ಎಂದು ಅರಸನು ಆಜ್ಞಾಪಿಸುತ್ತಾನೆ ಎಂದು ಹೇಳಿ” ಎಂದನು.


ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.


ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ.


“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.


ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ದ್ವಾರದಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.


ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ದಾವೀದನು ತನಗಾಗಿ ಬತ್ಷೆಬೆಳನ್ನು ಕರೆತರಲು ಸಂದೇಶಕರನ್ನು ಕಳುಹಿಸಿದನು. ಅವಳು ದಾವೀದನ ಬಳಿಗೆ ಬಂದಾಗ ಅವನು ಅವಳೊಡನೆ ಲೈಂಗಿಕ ಸಂಬಂಧವನ್ನು ಹೊಂದಿದನು. ತನ್ನ ಮಾಸಿಕ ಮುಟ್ಟು ನಿಂತಮೇಲೆ ತನ್ನನ್ನು ಶುದ್ಧಪಡಿಸಿಕೊಳ್ಳಲು ಆಕೆ ಸ್ನಾನಮಾಡಿಕೊಂಡ ಮೇಲೆ ಇದು ಸಂಭವಿಸಿತು.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಆಸನು ಪ್ರಾರಂಭದಿಂದ ಕೊನೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಯೆಹೂದ ಮತ್ತು ಇಸ್ರೇಲ್ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿವೆ.


ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಧಿಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನ್ನು ಕೇಳಿದರು. ಅವರಿಗೆ ಕೋಪಬಂದಿತು. ರಾಜನಾದ ಯೆಹೋಯಾಕೀಮನು ಊರೀಯನನ್ನು ಕೊಲ್ಲಬಯಸಿದನು. ಆದರೆ ಯೆಹೋಯಾಕೀಮನು ತನ್ನನ್ನು ಕೊಲ್ಲಬಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು.


ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.


ಬೇತೇಲಿನ ಯಜ್ಞವೇದಿಕೆಯನ್ನು ಕುರಿತು ದೇವಮನುಷ್ಯನು ಹೇಳಿದ ಸಂದೇಶವು ರಾಜನಾದ ಯಾರೊಬ್ಬಾಮನಿಗೆ ಕೇಳಿಸಿತು. ಅವನು ತನ್ನ ಕೈಯನ್ನು ಯಜ್ಞವೇದಿಕೆಯಿಂದ ಥಟ್ಟನೆ ತೆಗೆದು, ಆ ಮನುಷ್ಯನ ಕಡೆಗೆ ಗುರಿಮಾಡಿ, “ಆ ಮನುಷ್ಯನನ್ನು ಹಿಡಿಯಿರಿ!” ಎಂದು ಹೇಳಿದನು. ಆದರೆ ರಾಜನು ಇದನ್ನು ಹೇಳಿದಾಗ, ಅವನ ಕೈಗೆ ಲಕ್ವ ಹೊಡೆಯಿತು. ಅವನು ಅದನ್ನು ಚಲಿಸಲಾಗಲಿಲ್ಲ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು