Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:12 - ಪರಿಶುದ್ದ ಬೈಬಲ್‌

12 ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಸರ್ವೇಶ್ವರನ ಸಹಾಯವನ್ನು ಕೋರಲಿಲ್ಲ; ವೈದ್ಯರ ಸಹಾಯವನ್ನು ಮಾತ್ರ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಅವನ ಕಾಲುಗಳಿಗೆ ಬಹುಕಠಿಣವಾದ ರೋಗವುಂಟಾಯಿತು. ಈ ರೋಗದಲ್ಲಿಯೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:12
15 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಅಲ್ಲದೆ ಅವನು ಯೆಹೋವನ ಸಲಹೆಯನ್ನು ಪಡೆದುಕೊಳ್ಳುವ ಬದಲಾಗಿ ಮಾಟಮಂತ್ರ ಮಾಡುವ ಹೆಂಗಸಿನ ಬಳಿಗೆ ಹೋದನು. ಆದ್ದರಿಂದಲೇ ಯೆಹೋವನು ರಾಜ್ಯವನ್ನು ಸೌಲನಿಂದ ತೆಗೆದು ಇಷಯನ ಮಗನಾದ ದಾವೀದನಿಗೆ ಕೊಟ್ಟನು.


ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.


ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ.


“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ದೇಮನು ಮತ್ತು ಪ್ರೀತಿಯ ಸ್ನೇಹಿತನಾದ ವೈದ್ಯ ಲೂಕನು ವಂದನೆಗಳನ್ನು ಹೇಳುತ್ತಾರೆ.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ನೀವಾದರೋ ನಿಮ್ಮ ಆ ಜ್ಞಾನವನ್ನು ಸುಳ್ಳುಗಳಿಂದ ಮುಚ್ಚಲು ಪ್ರಯತ್ನಿಸುತ್ತಿದ್ದೀರಿ. ನೀವೆಲ್ಲರೂ ಗುಣಪಡಿಸಲಾಗದ ವೈದ್ಯರುಗಳಂತಿದ್ದೀರಿ.


ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.


ಆಸನು ತನ್ನ ಆಳ್ವಿಕೆಯ ನಲವತ್ತೊಂದನೆಯ ವರ್ಷದಲ್ಲಿ ತನ್ನ ಪೂರ್ವಿಕರ ಬಳಿ ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು