Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:14 - ಪರಿಶುದ್ದ ಬೈಬಲ್‌

14 ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಬುಕ್ಕಿಟ್ಟುಗಾರರ ಕಸಬಿನ ಮೇರೆಗೆ ವಿುಶ್ರಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು ಅವನು ತನಗೋಸ್ಕರ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಅವನಿಗೋಸ್ಕರ ಬಹುಧೂಪವನ್ನು ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:14
14 ತಿಳಿವುಗಳ ಹೋಲಿಕೆ  

ಎರಡು ವರ್ಷಗಳ ನಂತರ ಆ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಬಹಳ ನೋವನ್ನು ಅನುಭವಿಸಿ ಸತ್ತನು. ಅವನು ಸತ್ತಾಗ ಅವನ ತಂದೆಗೆ ಧೂಪಹಾಕಿ ಗೌರವಿಸಿದಂತೆ ಯೆಹೋರಾಮನಿಗೆ ಮಾಡಲಿಲ್ಲ.


ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.


ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.


ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.


ಆ ಸೇವಕನನ್ನು ‘ನೀನಿಲ್ಲಿ ಏನು ಮಾಡುತ್ತಿರುವೆ? ನಿನ್ನ ಕುಟುಂಬದವರಲ್ಲಿ ಯಾರನ್ನಾದರೂ ಇಲ್ಲಿ ಸಮಾಧಿ ಮಾಡಿರುವಿಯಾ? ಇಲ್ಲಿ ಸಮಾಧಿಯನ್ನು ಯಾಕೆ ನಿರ್ಮಿಸಿರುವೆ? ಎಂದು ಕೇಳು.’” ಅದಕ್ಕೆ ಯೆಶಾಯನು, “ಈ ಮನುಷ್ಯನನ್ನು ನೋಡು. ಅವನು ತನ್ನ ಸಮಾಧಿಯನ್ನು ಎತ್ತರವಾದ ಸ್ಥಳದಲ್ಲಿ ಸಿದ್ಧಪಡಿಸುತ್ತಿದ್ದಾನೆ. ಅವನು ಸಮಾಧಿ ಸಿದ್ಧಪಡಿಸಲು ಬಂಡೆಯನ್ನು ಕೊರೆಯುತ್ತಿದ್ದಾನೆ.


ಸತ್ತ ನೊಣಗಳಿಂದ ಉತ್ತಮವಾದ ಪರಿಮಳತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹುಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.


ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು.


‘ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ’ ಎಂದು ತಿಳಿಸಿರಿ” ಎಂಬುದಾಗಿ ಹೇಳಿದನು.


ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.


ಆಸನು ತನ್ನ ಆಳ್ವಿಕೆಯ ನಲವತ್ತೊಂದನೆಯ ವರ್ಷದಲ್ಲಿ ತನ್ನ ಪೂರ್ವಿಕರ ಬಳಿ ಸೇರಿದನು.


ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.


ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು