Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:4 - ಪರಿಶುದ್ದ ಬೈಬಲ್‌

4 ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರೋಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:4
14 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು.


ಅಲ್ಲದೆ, ಬಾಲಾತ್ ಪಟ್ಟಣ ಮತ್ತು ಇನ್ನಿತರ ಪಟ್ಟಣಗಳನ್ನು ಉಗ್ರಾಣ ನಗರಗಳನ್ನಾಗಿ ಮಾಡಿದನು. ಅವನು ರಥಗಳನ್ನು ಇಡುವದಕ್ಕಾಗಿಯೂ ಮತ್ತು ರಾಹುತರ ವಾಸಕ್ಕಾಗಿಯೂ ಪಟ್ಟಣಗಳನ್ನು ಕಟ್ಟಿಸಿದನು. ಜೆರುಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ಮತ್ತು ತನ್ನ ಆಡಳಿತದಲ್ಲಿದ್ದ ದೇಶಗಳಲ್ಲಿಯೂ ಸೊಲೊಮೋನನು ತನ್ನ ಇಷ್ಟದ ಪ್ರಕಾರ ಕಟ್ಟಿಸಿದನು.


ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದ್ದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.


ಧಾನ್ಯಗಳನ್ನು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುವ ಉಗ್ರಾಣನಗರಗಳನ್ನು ಸಹ ಕಟ್ಟಿಸಿದನು; ತನ್ನ ರಥಗಳಿಗೆ ಮತ್ತು ಕುದುರೆಗಳಿಗೆ ತಾಣವಾದ ಸ್ಥಳಗಳನ್ನೂ ಕಟ್ಟಿಸಿದನು; ತಾನು ಆಳುತ್ತಿದ್ದ ಜೆರುಸಲೇಮಿನಲ್ಲಿ, ಲೆಬನೋನಿನಲ್ಲಿ, ಮತ್ತಿತರ ಎಲ್ಲಾ ಸ್ಥಳಗಳಲ್ಲಿ ತಾನು ಅಪೇಕ್ಷಿಸಿದ ಕಟ್ಟಡಗಳನ್ನೆಲ್ಲ ಕಟ್ಟಿಸಿದನು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.


ಲೋಟನು ಸೆರೆಯಾಳಾಗಿರುವುದು ಅಬ್ರಾಮನಿಗೆ ತಿಳಿಯಿತು. ಆದ್ದರಿಂದ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿದ ಗಂಡಾಳುಗಳನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವರಲ್ಲಿ ಮುನ್ನೂರ ಹದಿನೆಂಟು ಮಂದಿ ತರಬೇತಿ ಹೊಂದಿದ್ದ ಸೈನಿಕರಾಗಿದ್ದರು. ಅಬ್ರಾಮನು ಅವರೊಡನೆ ಹೊರಟು ಶತ್ರುಗಳನ್ನು ದಾನ್ ಊರಿನವರೆಗೂ ಹಿಂದಟ್ಟಿದನು.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


“ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವುದನ್ನು ನಿಲ್ಲಿಸುವನು.”


ಇದನ್ನು ಕೇಳಿದ ಬಾಷನು ರಾಮ ಪಟ್ಟಣವನ್ನು ಕೋಟೆಯಾಗಿ ಕಟ್ಟುವ ಕೆಲಸವನ್ನು ಬಿಟ್ಟುಬಿಟ್ಟನು.


ಹಿಂದಿನ ಕಾಲದಲ್ಲಿ, ಜೆಬುಲೋನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.


ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು