Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:9 - ಪರಿಶುದ್ದ ಬೈಬಲ್‌

9 ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:9
38 ತಿಳಿವುಗಳ ಹೋಲಿಕೆ  

ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”


ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.


ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.


“ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ. ಅವನ ಪ್ರತಿಯೊಂದು ಹೆಜ್ಜೆ ಆತನಿಗೆ ಗೊತ್ತಿದೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.


ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.


ಆತನು ಆಕಾಶವನ್ನೂ ಭೂಮಿಯನ್ನೂ ಬಾಗಿ ನೋಡುವನು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ದಾವೀದನು ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು.


“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.


ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.


ಬಾಷನು ಇಸ್ರೇಲನ್ನು ಆಳುತ್ತಿದ್ದ ಕಾಲದಲ್ಲೆಲ್ಲಾ, ಯೆಹೂದದ ರಾಜನಾದ ಆಸನ ವಿರುದ್ಧವಾಗಿ ಯುದ್ಧ ಮಾಡುತ್ತಲೇ ಇದ್ದನು.


ಅವು ಮೂಢ ಪ್ರಶ್ನೆಗಳು. ನೀವು ಬೀಜವನ್ನು ಬಿತ್ತಿದಾಗ, ಆ ಬೀಜವು ಜೀವ ಹೊಂದಿಕೊಂಡು ಬೆಳೆಯುವುದಕ್ಕಿಂತ ಮುಂಚೆ ಸಾಯಲೇಬೇಕು.


ಆದರೂ ಯೆಹೂದದ ಎಲ್ಲಾ ಉನ್ನತಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.


ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.


ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ. ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ನಾನು ನನ್ನ ಮೊಮ್ಮಕ್ಕಳಿಗೆ ಮುದ್ದಿಡುವುದಕ್ಕೂ ನನ್ನ ಹೆಣ್ಣುಮಕ್ಕಳನ್ನು ಬೀಳ್ಕೊಡುವುದಕ್ಕೂ ನೀನು ನನಗೆ ಅವಕಾಶ ಕೊಡಲಿಲ್ಲ. ನಿನ್ನ ಮೂಢತನದಿಂದ ಹೀಗೆ ಮಾಡಿರುವೆ.


ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದ ತನಕ ದೇಶದಲ್ಲಿ ಯುದ್ಧವೇ ಇರಲಿಲ್ಲ.


ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು.


ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.


ದೇವರು ಭೂಮಿಯ ಕಟ್ಟಕಡೆಯತನಕ ದೃಷ್ಟಿಸಿ ಆಕಾಶದ ಕೆಳಗಿರುವ ಪ್ರತಿಯೊಂದನ್ನೂ ನೋಡುವವನಾಗಿದ್ದಾನೆ.


ಆತನು ತನ್ನ ಮಹಾಸಿಂಹಾಸನದಿಂದ ಭೂನಿವಾಸಿಗಳೆಲ್ಲರನ್ನು ನೋಡುವನು.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು