Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:16 - ಪರಿಶುದ್ದ ಬೈಬಲ್‌

16 “ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದ್ದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:16
18 ತಿಳಿವುಗಳ ಹೋಲಿಕೆ  

ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.


ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.


“ನನ್ನ ಜೀವದಾಣೆ, ನನ್ನ ಕುರಿಗಳು ಎಲ್ಲಾ ಬಗೆಯ ಕಾಡುಪ್ರಾಣಿಗಳಿಂದ ಹಿಡಿಯಲ್ಪಟ್ಟು ಅವುಗಳಿಗೆ ಆಹಾರವಾದವು. ಯಾಕೆಂದರೆ ಅವುಗಳಿಗೆ ಒಳ್ಳೆಯ ಕುರುಬರಿರಲಿಲ್ಲ. ನನ್ನ ಕುರುಬರು ತಮ್ಮ ಕುರಿಗಳಿಗೆ ಗಮನಕೊಡಲಿಲ್ಲ. ಅವರು ಅವುಗಳನ್ನು ಕೊಂದು ತಿಂದರು. ಆದರೆ ಮಂದೆಗೆ ಆಹಾರ ಒದಗಿಸಲಿಲ್ಲ.”


ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು’” ಎಂದು ಹೇಳಿದನು.


ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”


ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.


ಆಗ ಅಹಾಬನು ಮೀಕಾಯೆಹುವಿಗೆ, “ನೀನು ಯೆಹೋವನ ಹೆಸರಿನಲ್ಲಿ ನನಗೆ ಸತ್ಯವನ್ನೇ ತಿಳಿಸಬೇಕೆಂದು ಎಷ್ಟೋ ಸಲ ನಿನ್ನಿಂದ ಪ್ರಮಾಣ ಮಾಡಿಸಿರುತ್ತೇನೆ” ಎಂದು ಹೇಳಿದಾಗ ಮೀಕಾಯೆಹುವು,


ಇಸ್ರೇಲಿನ ರಾಜನಾದ ಅಹಾಬನು ಯೆಹೋಷಾಫಾಟನಿಗೆ, “ಮೀಕಾಯೆಹುವು ನನ್ನ ಬಗ್ಗೆ ಯೆಹೋವನಿಂದ ಒಳ್ಳೆಯ ಸಂದೇಶವನ್ನು ಕೊಡುವದೇ ಇಲ್ಲವೆಂದು ನಿನಗೆ ಹೇಳಿದೆನಲ್ಲಾ? ಅವನಲ್ಲಿ ನನ್ನ ವಿಷಯವಾಗಿ ಕೆಟ್ಟ ಸಂದೇಶವೇ ಇರುವದು” ಎಂದು ಹೇಳಿದನು.


ನಾನು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡುವೆನು; ನೀನು ಬರಿದಾಗುವೆ. ನಾನು ಒಡೆಯನಾದ ಯೆಹೋವನೆಂದು ಆಗ ನೀನು ತಿಳಿಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು