Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:18 - ಪರಿಶುದ್ದ ಬೈಬಲ್‌

18 ಮೀಕಾಯೆಹುವು, “ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:18
17 ತಿಳಿವುಗಳ ಹೋಲಿಕೆ  

“ನಾನು ನೋಡುತ್ತಿದ್ದಂತೆಯೇ, ಆಸನಗಳನ್ನು ಅವುಗಳ ಸ್ಥಳದಲ್ಲಿ ಹಾಕಲಾಯಿತು. ಪುರಾತನ ರಾಜನು ತನ್ನ ಆಸನದ ಮೇಲೆ ಕುಳಿತುಕೊಂಡನು. ಆತನ ಉಡುಪು ಬಹಳ ಶುಭ್ರವಾಗಿತ್ತು. ಅದು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಕೂದಲು ಶುಭ್ರವಾಗಿತ್ತು. ಅದು ಬಿಳಿಯ ಉಣ್ಣೆಯಂತೆ ಶುಭ್ರವಾಗಿತ್ತು. ಆತನ ಆಸನವು ಬೆಂಕಿಯಿಂದ ಮಾಡಲಾಗಿತ್ತು. ಅದರ ಚಕ್ರಗಳು ಬೆಂಕಿಯ ಜ್ವಾಲೆಗಳಿಂದ ಮಾಡಲಾಗಿದ್ದವು.


ಆಗ ಸುಗಂಧ ಮರಗಳ ಬಳಿ ನಿಂತಿದ್ದ ಮನುಷ್ಯನು, “ಈ ಕುದುರೆಗಳು ಭೂಮಿಯ ಮೇಲೆ ಅತ್ತಿತ್ತ ತಿರುಗಾಡುವಂತೆ ಯೆಹೋವನು ಕಳುಹಿಸಿದನು” ಎಂದನು.


ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.


ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ.


ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.


ಆಗ ಯೆಶಾಯನು ಹಿಜ್ಕೀಯನಿಗೆ, “ಸರ್ವಶಕ್ತನಾದ ಯೆಹೋವನ ಮಾತುಗಳನ್ನು ಕೇಳು:


ಆದಕಾರಣ ಜೆರುಸಲೇಮಿನಲ್ಲಿರುವ ಅಧಿಪತಿಗಳೇ, ಯೆಹೋವನ ಸಂದೇಶವನ್ನು ನೀವು ಕೇಳಬೇಕು. ಆದರೆ ನೀವು ಅದನ್ನು ಕೇಳಲು ನಿರಾಕರಿಸುತ್ತಿದ್ದೀರಿ.


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ಆದ್ದರಿಂದ ಅವನು, “ಇದು ದೇವರ ಪಾಳೆಯ” ಎಂದು ಹೇಳಿ “ಮಹನಯಿಮ್” ಎಂದು ಹೆಸರಿಟ್ಟನು.


ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು.


ಇಸ್ರೇಲಿನ ರಾಜನಾದ ಅಹಾಬನು ಯೆಹೋಷಾಫಾಟನಿಗೆ, “ಮೀಕಾಯೆಹುವು ನನ್ನ ಬಗ್ಗೆ ಯೆಹೋವನಿಂದ ಒಳ್ಳೆಯ ಸಂದೇಶವನ್ನು ಕೊಡುವದೇ ಇಲ್ಲವೆಂದು ನಿನಗೆ ಹೇಳಿದೆನಲ್ಲಾ? ಅವನಲ್ಲಿ ನನ್ನ ವಿಷಯವಾಗಿ ಕೆಟ್ಟ ಸಂದೇಶವೇ ಇರುವದು” ಎಂದು ಹೇಳಿದನು.


‘ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕೆಂದರೆ ಅಲ್ಲಿ ಅವನು ಸಾಯಬೇಕು’ ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆಬೇರೆ ವಿಧಾನವನ್ನು ತಿಳಿಸಿದರು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು