Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:4 - ಪರಿಶುದ್ದ ಬೈಬಲ್‌

4 ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷೆಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಈ ಜನರನ್ನೆಲ್ಲ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋಷಾಫಾಟನು ಯೆರೂಸಲೇವಿುನಲ್ಲಿ ವಾಸವಾಗಿದ್ದು ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದವರೆಗೂ ಸಂಚರಿಸಿ ತನ್ನ ಪ್ರಜೆಗಳನ್ನು ಅವರ ಪಿತೃಗಳ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:4
12 ತಿಳಿವುಗಳ ಹೋಲಿಕೆ  

ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.


ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.


ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.


ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.


ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು