Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:6 - ಪರಿಶುದ್ದ ಬೈಬಲ್‌

6 ಅವನು ಅವರಿಗೆ, “ನೀವು ಮಾಡುವ ಕಾರ್ಯದಲ್ಲಿ ಜಾಗರೂಕರಾಗಿರಿ. ನೀವು ಯೆಹೋವನ ಪರವಾಗಿ ಜನರ ನ್ಯಾಯವನ್ನು ತೀರಿಸುವವರಾಗಿದ್ದೀರಿ. ನೀವು ನ್ಯಾಯತೀರಿಸುವಾಗ ಯೆಹೋವನು ನಿಮ್ಮ ಸಂಗಡ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಹೇಗೆ ಕೆಲಸನಡಿಸುತ್ತೀರಿ ಎಂಬದರ ವಿಷಯ ನೋಡಿಕೊಳ್ಳಿರಿ. ನೀವು ನ್ಯಾಯತೀರಿಸುವದು ಮನುಷ್ಯರಿಗೋಸ್ಕರವಲ್ಲ, ಯೆಹೋವನಿಗೋಸ್ಕರವೇ. ನ್ಯಾಯವಿಚಾರಣೆ ನಡೆಯುವಾಗ ಆತನು ನಿಮ್ಮ ಮಧ್ಯದಲ್ಲಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:6
10 ತಿಳಿವುಗಳ ಹೋಲಿಕೆ  

ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”


ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.


ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.


ಬಳಿಕ ಅವನು ಅವರಿಗೆ, “ಇಸ್ರೇಲ್ ಜನರೇ, ನೀವು ಇವರಿಗೆ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯಾಗಿರಿ!


ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು