Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:12 - ಪರಿಶುದ್ದ ಬೈಬಲ್‌

12 ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಹೀರಾಮನು, “ಯೆಹೋವ ದೇವರಿಗೋಸ್ಕರ ಆಲಯವನ್ನೂ ತನ್ನ ರಾಜ್ಯಕ್ಕೋಸ್ಕರ ಅರಮನೆಯನ್ನೂ ಕಟ್ಟಿಸುವುದಕ್ಕೆ ಅರಸನಾದ ದಾವೀದನಿಗೆ ಬುದ್ಧಿ ವಿವೇಚನೆಯುಳ್ಳ ಒಬ್ಬ ಮಗನನ್ನು ಕೊಟ್ಟಿದ್ದಾರೆ; ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:12
21 ತಿಳಿವುಗಳ ಹೋಲಿಕೆ  

ಯೆಹೋವನು ಆಜ್ಞಾಪಿಸಲು ಆಕಾಶವು ಸೃಷ್ಟಿಯಾಯಿತು! ಆತನ ಉಸಿರು ಭೂಮಿಯ ಮೇಲಿರುವ ಸಮಸ್ತವನ್ನು ಸೃಷ್ಟಿಸಿತು.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.


“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.


ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!


ದೀರ್ಘ ದುಃಖದಿಂದಾಗಿ ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.


ದೇವಾಲಯವನ್ನು ಕಟ್ಟಿ ದೇವರಿಗೆ ಘನತೆಯನ್ನು ಸಲ್ಲಿಸಲು ಸೊಲೊಮೋನನು ಯೋಜಿಸಿದನು. ಮಾತ್ರವಲ್ಲದೆ ತನಗೆ ವಾಸಿಸಲು ಒಂದು ಅರಮನೆಯನ್ನು ಕಟ್ಟಲೂ ಸಿದ್ಧತೆ ಮಾಡಿದನು.


ನೆರೆದು ಬಂದವರಿಗೆ ದಾವೀದನು, “ದೇವರಾದ ಯೆಹೋವನಿಗೆ ಸ್ತೋತ್ರಮಾಡಿರಿ” ಎಂದನು. ಆಗ ಎಲ್ಲರೂ ಅವರ ಪೂರ್ವಿಕರ ದೇವರಿಗೆ ಸ್ತುತಿಸುತ್ತಾ ತಲೆಬಾಗಿ ದೇವರನ್ನೂ ಅರಸನನ್ನೂ ನಮಸ್ಕರಿಸಿದರು.


ಸೊಲೊಮೋನನು ಹೇಳಿದುದನ್ನು ಹೀರಾಮನು ಕೇಳಿದಾಗ ಬಹಳ ಸಂತೋಷಗೊಂಡು, “ಈ ಮಹಾ ಜನಾಂಗಕ್ಕೋಸ್ಕರ ದಾವೀದನಿಗೆ ವಿವೇಕಿಯಾದ ಮಗನನ್ನು ಕರುಣಿಸಿದ್ದಕ್ಕಾಗಿ ನಾನು ಯೆಹೋವನಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದನು.


ನಾನು ಹೂರಾಮಾಬೀ ಎಂಬ ಹೆಸರಿನ ಅನುಭವಶಾಲಿಯಾದ ಕುಶಲಕರ್ಮಿಯನ್ನು ನಿನಗೋಸ್ಕರ ಕಳುಹಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು