Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:6 - ಪರಿಶುದ್ದ ಬೈಬಲ್‌

6 ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಲ್ಲಿ ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ನಾನು ಆತನ ಸನ್ನಿಧಿಯಲ್ಲಿ ಧೂಪಹಾಕುವ ಉದ್ದೇಶದಿಂದ ಹೊರತು ಆತನ ವಾಸಕ್ಕಾಗಿ ಆಲಯವನ್ನು ಕಟ್ಟಿಸುವದಕ್ಕೆ ಎಷ್ಟರವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅವರಿಗೋಸ್ಕರ ಆಲಯವನ್ನು ಕಟ್ಟಿಸಲು ಸಮರ್ಥನಾದವನು ಯಾರು? ಆಕಾಶವೂ ಉನ್ನತೋನ್ನತ ಆಕಾಶವೂ ಅವರಿಗೆ ಸಾಲದು. ಅವರ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಅವರಿಗೆ ಆಲಯವನ್ನು ಕಟ್ಟಿಸಲು ನಾನು ಎಷ್ಟರವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:6
19 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


ಈ ಜನರನ್ನು ಸರಿಯಾದ ರೀತಿಯಲ್ಲಿ ಆಳುವ ಹಾಗೆ ನನಗೆ ಜ್ಞಾನವನ್ನೂ ವಿವೇಕವನ್ನೂ ದಯಪಾಲಿಸು. ನಿನ್ನ ಸಹಾಯವಿಲ್ಲದೆ ಈ ನಿನ್ನ ಜನರನ್ನು ಆಳಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದನು.


ನಾವು ಕಾಣಿಕೆಯಾಗಿ ಕೊಟ್ಟಿರುವ ವಸ್ತುಗಳು ನನ್ನಿಂದಾಗಲಿ ಮತ್ತು ನನ್ನ ಜನರಿಂದಾಗಲಿ ಬರಲಿಲ್ಲ. ಇವೆಲ್ಲವೂ ನಿನ್ನಿಂದಲೇ ಬಂದವುಗಳು. ನಿನ್ನಿಂದ ನಾವು ಹೊಂದಿದವುಗಳನ್ನೇ ನಿನಗೆ ಕೊಟ್ಟಿದ್ದೇವೆ.


ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?


ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?


“ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು.


ಯೆಹೋವನು ತನ್ನ ವಿಶೇಷವಾದ ಸ್ಥಳವನ್ನು ನಿಮ್ಮ ಕುಲಗಳವರ ಮಧ್ಯದಿಂದ ಆರಿಸಿಕೊಳ್ಳುವನು. ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ನಾನು ನಿಮಗೆ ಹೇಳಿದವುಗಳೆಲ್ಲವನ್ನು ಅದೇ ಸ್ಥಳದಲ್ಲಿ ಮಾಡಿರಿ.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡಬಲ್ಲನು.


ರಾಜನಾದ ಸೊಲೊಮೋನನು ತೂರಿನಲ್ಲಿದ್ದ ಹೀರಾಮ್ ಎಂಬವನಿಗೆ ಸಂದೇಶವನ್ನು ಕಳುಹಿಸಿ ಅವನನ್ನು ಜೆರುಸಲೇಮಿಗೆ ಕರೆಸಿದನು.


ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.


ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು