Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:10 - ಪರಿಶುದ್ದ ಬೈಬಲ್‌

10 “ಈಗ ಅಮ್ಮೋನಿಯರೂ ಮೋವಾಬಿನವರೂ ಸೇಯೀರ್ ಬೆಟ್ಟಪ್ರದೇಶದವರೂ ನಮಗೆ ವಿರೋಧವಾಗಿ ಬಂದಿದ್ದಾರೆ. ಈಜಿಪ್ಟಿನಿಂದ ಇಸ್ರೇಲರು ಹೊರಬಂದಾಗ ಅವರ ದೇಶದೊಳಗಿಂದ ಪ್ರಯಾಣ ಮಾಡಲು ನೀನು ಬಿಡಲಿಲ್ಲ. ಆದ್ದರಿಂದ ಇಸ್ರೇಲರು ಅವರನ್ನು ನಾಶಮಾಡದೆ ಬೇರೆ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:10
10 ತಿಳಿವುಗಳ ಹೋಲಿಕೆ  

ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”


“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”


ಕೆಲಕಾಲದನಂತರ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನೊಂದಿಗೆ ಯುದ್ಧಮಾಡಲು ಬಂದರು.


ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.


ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು, ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿಬಂದಿದ್ದಾರೆ.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು